Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...