Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...