Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

- Advertisement -
- Advertisement -

ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುವ ದೃಶ್ಯಗಳುಳ್ಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕಲ್ಲು ಅಫ್ಘಾನಿಸ್ತಾನದಲ್ಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ಕಲ್ಲು ಹೊರಗಿನಿಂದ ತಂಪಾಗಿದ್ದರೂ, ಅದರ ಮೇಲೆ ಉಕ್ಕು ಮತ್ತು ಕಬ್ಬಿಣದಿಂದ ಮಾಡಿದ ಯಾವುದಾದರೂ ವಸ್ತುವನ್ನು ಇಟ್ಟರೆ ಅವುಗಳನ್ನು ಕರಗಿಸುತ್ತದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ತಿಳಿಯೋಣ. 

ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಅಲ್ಲದೆ, ಕೆಲವು ಪಾಕಿಸ್ತಾನಿ ಬಳಕೆದಾರರು ಉರ್ದುವಿನಲ್ಲಿಯೂ ಈ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. (ಲಿಂಕ್ 1ಲಿಂಕ್ 2ಲಿಂಕ್ 3)

ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಬಳಿಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ, masralyoum.net ಎಂಬ ವೆಬ್‌ಸೈಟ್‌ನ ಲೇಖನವೊಂದು ಕಂಡುಬಂದಿದೆ. ವಿಡಿಯೋದಲ್ಲಿರುವ ಮೊಳೆಗಳು ಗ್ಯಾಲಿಯಂ ಎಂಬ ಲೋಹದಿಂದ ಮಾಡಲ್ಪಟ್ಟಿದ್ದು, ಅವುಗಳ ಕರಗುವ ಬಿಂದು ತುಂಬಾ ಕಡಿಮೆ ಇರುತ್ತವೆ. ಅವುಗಳನ್ನು ಸುಮಾರು 29ºC ಬಿಸಿ ಇರುವ ಕಲ್ಲಿನ ಮೇಲೆ ಇಟ್ಟಾಗ ಸುಲಭವಾಗಿ ಕರಗುತ್ತವೆ ಎಂದು ಜೆಡ್ಡಾ ಖಗೋಳವಿಜ್ಞಾನ ಸೊಸೈಟಿಯ ಸಂಸ್ಥಾಪಕ ಎಂ. ಮಜಿದ್ ಅಬು ಜಹ್ರಾ ಅವರು ಲೇಖನದಲ್ಲಿ ಉಲ್ಲೇಖಿಸಿದ್ದಾರೆ. 

ಲೇಖನವು ನವೆಂಬರ್ 27, 2021 ರ ಫೇಸ್‌ಬುಕ್ ಪೋಸ್ಟ್‌ನ ಲಿಂಕ್ ಅನ್ನು ಸಹ ಒಳಗೊಂಡಿದೆ. ಬೆಚ್ಚಗಿನ ಮೇಲ್ಮೈಯಲ್ಲಿ ಗ್ಯಾಲಿಯಂನಿಂದ ಮಾಡಿದ ವಸ್ತುಗಳನ್ನು ಇರಿಸಿದಾಗ ಸೂರ್ಯನ ಬೆಳಕು ಕೂಡ ಸುಲಭವಾಗಿ ಅವುಗಳನ್ನು ಕರಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ಮಾಹಿತಿಗಾಗಿ ಹುಡುಕಿದಾಗ, ಏಪ್ರಿಲ್ 12, 2018 ರಂದು ಪ್ರಕಟವಾಗಿದ್ದ ABC10 ಸುದ್ದಿ ವರದಿ ದೊರೆತಿದೆ. ಈ ವೀಡಿಯೊ ವರದಿಯು ಕಲ್ಲಿನ ಮೇಲೆ ಇರಿಸಲಾದ ಮೊಳೆಯು ಗ್ಯಾಲಿಯಂನಿಂದ ಮಾಡಲ್ಪಟ್ಟಿದೆ ಎಂದು ಉಲ್ಲೇಖಿಸಿದೆ. ಇದು 85.6°F ಕರಗುವ ಬಿಂದುವನ್ನು ಹೊಂದಿದೆ. ಈ ತಾಪಮಾನದಲ್ಲಿ, ಗ್ಯಾಲಿಯಂ ಸುಲಭವಾಗಿ ಕರಗುತ್ತದೆ ಎಂದು ವಿವರಿಸಲಾಗಿದೆ.

ಮಾನವ ದೇಹದ ಸರಾಸರಿ ಉಷ್ಣತೆಯು ಸುಮಾರು 98.6°F ಆಗಿದೆ ಎಂಬುದನ್ನೂ ನಾವು ಈ ಸಮಯದಲ್ಲಿ ಗಮನಿಸಬೇಕು. ಏಕೆಂದರೆ, ಈ ಲೋಹವು ಮಾನವ ಸ್ಪರ್ಶದಿಂದಲೂ ಸರಳವಾಗಿ ಕರಗುತ್ತದೆ. ಆದರೂ, ಇದು ಕೋಣೆಯ ಉಷ್ಣಾಂಶದಲ್ಲಿ ಘನವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ (4044°F) ಕುದಿಯುವ ಬಿಂದುವನ್ನು ಹೊಂದಿದೆ. ಗ್ಯಾಲಿಯಂ ಅನ್ನು ಹೊರತುಪಡಿಸಿ, ಪಾದರಸ, ಸೀಸಿಯಮ್ ಮತ್ತು ರುಬಿಡಿಯಂನಂತಹ ಇತರ ಲೋಹಗಳು ಕೋಣೆಯ ಉಷ್ಣಾಂಶದಲ್ಲಿ ದ್ರವ ಸ್ಥಿತಿಯಲ್ಲಿರುತ್ತವೆ. ಅದಕ್ಕಾಗಿಯೇ ಅವುಗಳನ್ನು ಥರ್ಮಾಮೀಟರ್‌ಗಳಲ್ಲಿ ಬಳಸಲಾಗುತ್ತದೆ.

ಅಲ್ಲದೆ, ಉಕ್ಕು ಮತ್ತು ಕಬ್ಬಿಣವನ್ನು ಕರಗಿಸಿದಾಗ ಅವು ಕ್ರಮವಾಗಿ ನೀಲಿ ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಈ ಲೋಹದ ಬಣ್ಣವು ದ್ರವೀಕರಿಸಿದ ನಂತರವೂ ಅದೇ ಬಣ್ಣದ್ದು ಆಗಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ವೀಡಿಯೊದಲ್ಲಿ ಕಂಡುಬರುವ ಕಲ್ಲು ಮಾಂತ್ರಿಕವಾದುದ್ದಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಆದರೆ, ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳಿಗೆ ಕಾರಣ, 85.6°F ನ ಕಡಿಮೆ ಕರಗುವ ಬಿಂದುವನ್ನು ಹೊಂದಿರುವ ಲೋಹವಾದ ಗ್ಯಾಲಿಯಂನಿಂದ ಮಾಡಿದ ಮೊಳೆಗಳಾಗಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...