Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...