Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...