Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...