Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...