Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂಬ ಘೋಷಣೆಗಳು ಕೇಳಿಬಂದಿವೆ ಎಂಬ ವಿಡಿಯೋ ಒಂದು ವೈರಲ್ ಆಗಿದೆ. ಶಾ ಮೊಹಮದ್ ಖುರೇಷಿ ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡುವ ವೇಳೆ ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿವೆ ಎಂದು ಆ ವೀಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಕೆಲವರು ಇದನ್ನು ನರೇಂದ್ರ ಮೋದಿಯವರ ಸಾಧನೆ ಎಂಬಂತೆ ಸುದ್ದಿಯ ವಿಶ್ಲೇಷಣೆ ಮಾಡುತ್ತಿದ್ದಾರೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಸಂತೋಷ್ ಕೆಂಚೆಂಬ ಎಂಬುವವರು ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು 3 ಲಕ್ಷಕ್ಕೂ ಅಧಿಕ ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸುವಂತೆ ನಾನುಗೌರಿ.ಕಾಂಗೆ ಮನವಿಗಳು ಬಂದಿದ್ದವು.

ಫ್ಯಾಕ್ಟ್‌ ಚೆಕ್

ಈ ವೀಡಿಯೋದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ವೀಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದು 2020ರ ಅಕ್ಟೋಬರ್ 26 ರಂದು ನಡೆದ ಪಾಕಿಸ್ತಾನದ ಸಂಸತ್ತಿನ ಅಧಿವೇಶನದ ವೀಡಿಯೋ ಎಂಬುದು ತಿಳಿದುಬಂದಿದ್ದು ಅದರ ಪೂರ್ಣ ವಿಡಿಯೋ ದೊರಕಿದೆ. ಆ ವಿಡಿಯೋವನ್ನು ನೀವು ಕೆಳಗೆ ನೋಡಬಹುದು.

ಫ್ರೆಂಚ್ ವಿಡಂಬನಾತ್ಮಕ ನಿಯತಕಾಲಿಕೆ ಚಾರ್ಲಿ ಹೆಬ್ಡೊ ಪ್ರಕಟಿಸಿದ್ದ “ನಿಂದೆನೆಯ” ವ್ಯಂಗ್ಯಚಿತ್ರ ಮತ್ತು ಇಸ್ಲಾಂ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನೀಡಿದ ಹೇಳಿಕೆಗಳ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಕಿಸ್ತಾನದ ಸಂಸತ್ತಿನ ವಿದೇಶಾಂಗ ಸಚಿವ ಮೊಹಮದ್ ಖುರೇಷಿ ಧರ್ಮ ನಿಂದನೆಯ ವಿರುದ್ದ ನಿರ್ಣಯವನ್ನು ಸಂಸತ್ತಿನಲ್ಲಿ ಮಂಡಿಸಿದ ವೇಳೆ ಮೇಲಿನ ವಿಡಿಯೋದ 17.50ನೇ ನಿಮಿಷದಲ್ಲಿ ವಿರೋದ ಪಕ್ಷದ ಸದಸ್ಯರು “ವೋಟಿಂಗ್ ವೋಟಿಂಗ್” ಎಂದು ಘೋಷಣೆಗಳನ್ನು ಕೂಗಿದ್ದಾರೆ. ತದನಂತರ ಸ್ಪೀಕರ್‌ರವರು ವೋಟಿಂಗ್ ನಡೆಸಲಾಗುತ್ತದೆ, ಸದಸ್ಯರು ಸಮಾಧಾನದಿಂದಿರಬೇಕೆಂದು ಮನವಿ ಮಾಡುವುದನ್ನು ಸಹ ನೋಡಬಹುದು.

ಈ ಅಧಿವೇಶನದ ಕುರಿತು ಪಾಕಿಸ್ತಾನದ DAWN ಪತ್ರಿಕೆಯು ವಿವರವಾಗಿ ವರದಿ ಮಾಡಿದ್ದು, ಅದರಲ್ಲಿ ವಿರೋಧ ಪಕ್ಷಗಳು ವೋಟಿಂಗ್ ನಡೆಸುವುದಕ್ಕಾಗಿ ಘೋಷಣೆ ಕೂಗಿದ್ದಾರೆ ಎಂಬುದನ್ನು ಸಹ ಉಲ್ಲೇಖಿಸಿದೆ. ಅದನ್ನು ಇಲ್ಲಿ ಓದಬಹುದು.

ಇಂಡಿಯಾ ಟುಡೆ ಪತ್ರಿಕೆಯು ಪಾಕಿಸ್ತಾನದ ಹಿರಿಯ ಪತ್ರಕರ್ತ ಮತೀನ್ ಹೈದರ್ ಅವರನ್ನು ಸಂಪರ್ಕಿಸಿದಾಗ “ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತ ಸರ್ಕಾರವನ್ನು/ ಮೋದಿಯವರನ್ನು ಬೆಂಬಲಿಸುವ ಯಾವುದೇ ಘೋಷಣೆಗಳು ಕೇಳಿಬಂದಿಲ್ಲ” ಎಂದು ಖಚಿತಪಡಿಸಿದ್ದಾರೆ ಎಂದು ವರದಿ ಮಾಡಿದೆ. ಒಂದು ವೇಳೆ ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಮೋದಿ ಎಂದು ಘೋಷನೆಗಳು ಕೇಳಿಬಂದಿದ್ದರೆ ಅದು ಪಾಕಿಸ್ತಾನದ ಮತ್ತು ಭಾರತದ ಮುಖ್ಯವಾಹಿನಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ವರದಿಗಳು ನಮಗೆ ಕಂಡುಬಂದಿಲ್ಲ. ಹಾಗಾಗಿ ಆ ಘೋಷಣೆಗಳು ಕೂಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಆದರೆ ಕೆಲ ದುಷ್ಕರ್ಮಿಗಳು ಆ ವೋಟಿಂಗ್ ವೋಟಿಂಗ್ ಎಂಬ ಘೋಷಣೆಗಳನ್ನು ತೆಗೆದು ಆ ಜಾಗಕ್ಕೆ ಮೋದಿ ಮೋದಿ ಎಂಬ ದ್ವನಿಯನ್ನು ಎಡಿಟ್ ಮಾಡಿ ಸಿಂಕ್ ಮಾಡಲಾಗಿದೆ. ಹಾಗಾಗಿ ಇದು ಎಡಿಟ್ ಮಾಡಿದ ಫೇಕ್ ವೀಡಿಯೋವಾಗಿದೆ. ಇದೇ ವಿಡಿಯೋವನ್ನು ಅಸಲಿಯೆಂದು ಹಲವು ನ್ಯೂಸ್ ಚಾನಲೆಗಳು ಬಿತ್ತರಿಸಿ ಫೇಕ್ ನ್ಯೂಸ್ ಹರಡುತ್ತಿವೆ. ಹಾಗಾಗಿ ಇಂತಹ ವೀಡಿಯೋಗಳನ್ನು ನಂಬುವ ಮೊದಲು ಎಚ್ಚರವಹಿಸಬೇಕಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನೀರು ಕುಡಿಯುತ್ತಾ ಚಾರ್ಜಿಂಗ್‌ನಲ್ಲಿರುವ ಫೋನ್‌ ಬಳಸಿದರೇ ಫೋನ್ ಸ್ಟೋಟಗೊಳ್ಳುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Fake news post maadidavarige namma deshaddalli shikshisuwa yaaudu khanoon illave illaddidare mudalu Vanda Katthina khaanoonu maadabeku illaddidare mundina dinagallali dodda anaahutagalaagbahudu.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...