Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...