Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌...

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ಮುಂಬರುವ ನಾಗರಿಕ ಸ್ಥಳೀಯಚುನಾವಣೆಗೆ ಮುಂಚಿತವಾಗಿ, ಬಿಜೆಪಿಯಿಂದ ಮುಂಬೈಗಿರುವ ಸನ್ನಿಹಿತ ಅಪಾಯವನ್ನು ನೋಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ನ ಮರಾಠಿ ನಾಯಕತ್ವವು ಆಂತರಿಕ ಭಿನ್ನಾಭಿಪ್ರಾಯಗಳನ್ನು...

ಗುರುಗ್ರಾಮ: ಚಲಿಸುವ ಕಾರಿನಿಂದ ರಸ್ತೆಗೆ ಮೂತ್ರ ವಿಸರ್ಜಸಿ ವಿಕೃತಿ ಮೆರೆದ ಯುವಕ

ಹರಿಯಾಣದ ಗುರುಗ್ರಾಮದಿಂದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದ ಸದರ್ ಬಜಾರ್ ಪ್ರದೇಶದ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುವ ಥಾರ್‌ನ ಕಿಟಕಿಯಿಂದ ಮೂತ್ರ ವಿಸರ್ಜನೆ ಮಾಡಿದ್ದಾನೆ. ಯುವಕ ಸೋಹ್ನಾ ಚೌಕ್‌ನಿಂದ ಸದರ್ ಬಜಾರ್...

ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ,...

ನವೆಂಬರ್ 4 ರಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ; 6 ರಂದು ಫಲಿತಾಂಶ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣಾ ಸಮಿತಿಯು ಗುರುವಾರ 2025-26 ರ ವಿದ್ಯಾರ್ಥಿ ಚುನಾವಣೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನವೆಂಬರ್ 4 ರಂದು ಮತದಾನ ಮತ್ತು ನವೆಂಬರ್ 6 ರಂದು...

ನಿರ್ದಿಷ್ಟ ಜಾತಿ, ವಂಶಾವಳಿಯಿಂದ ದೇವಾಲಯಗಳ ಅರ್ಚಕರ ನೇಮಕ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಕೇರಳ ಹೈಕೋರ್ಟ್

ದೇವಾಲಯಗಳ ಅರ್ಚಕರ ನೇಮಕಾತಿಯು ಒಂದು ನಿರ್ದಿಷ್ಟ ಜಾತಿ ಅಥವಾ ವಂಶಾವಳಿಯಿಂದ ಮಾತ್ರ ಆಗಿರಬೇಕು ಎಂದು ಯಾರೂ ಒತ್ತಾಯಿಸಲು ಸಾಧ್ಯವಿಲ್ಲ. ಅಂತಹ ಜಾತಿ ಅಥವಾ ವಂಶಾಧಾರಿತ ನೇಮಕಾತಿಯು ಭಾರತದ ಸಂವಿಧಾನದಡಿ ರಕ್ಷಣೆ ಪಡೆಯಲು ಕಡ್ಡಾಯ...

ಪಶ್ಚಿಮ ಬಂಗಾಳ: ಸರ್ಕಾರಿ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಗರ ಪೊಲೀಸ್...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ...

ಆಂಧ್ರಪ್ರದೇಶ| ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ 'ಲೈಂಗಿಕ ದೌರ್ಜನ್ಯ'ಕ್ಕೆ ಸಂಬಂಧಿಸಿದ ಪ್ರಕರಣವು ಯಾರೂ ಊಹಿಸದ ತಿರುವು ಪಡೆದುಕೊಂಡಿದೆ. ಪೋಕ್ಸೋ ಪ್ರಕರಣದ ಆರೋಪಿ ನಾರಾಯಣ ರಾವ್ ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಆತ...

ಬಿಹಾರ ಚುನಾವಣೆ| ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್

ಮಿತ್ರ ಪಕ್ಷಗಳ ನಡುವೆ ವಾರಗಳ ಕಾಲ ನಡೆದ ವಾಗ್ವಾದ ಮತ್ತು ತೀವ್ರ ಚರ್ಚೆಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಯಿತು. ಈ ಮೂಲಕ ವಿರೋಧ...