Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...