Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...