Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...