Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...