Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...