Homeಫ್ಯಾಕ್ಟ್‌ಚೆಕ್FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು...

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

- Advertisement -
- Advertisement -

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ.

ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ನೆದರ್‌ಲ್ಯಾಂಡ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದೆ” ಎಂದು ಪೋಸ್ಟರ್ ಜೊತೆ ಬರೆಯಲಾಗಿತ್ತು.

ಈ ಹಿಂದೆ ಹಲವಾರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಬಿಜೆಪಿ ಹ್ಯಾಂಡಲ್‌ನಲ್ಲಿ ಹಾಕಿದ್ದ ಅದೇ ಹೇಳಿಕೆಯೊಂದಿಗೆ ಅಕ್ಟೋಬರ್ 10ರಂದು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ (@amitmalviya) ವೈರಲ್ ಪೋಸ್ಟರ್ ಹಂಚಿಕೊಂಡಿದ್ದರು.

ಅಕ್ಟೋಬರ್ 10ರಂದು ಟೈಮ್ಸ್ ನೌ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಕುರಿತ ವಿಡಿಯೋ ವರದಿಯನ್ನು ಪ್ರಕಟಿಸಿತ್ತು. ಅದರಲ್ಲಿ “ನೆದರ್‌ಲ್ಯಾಂಡ್ ಆರ್‌ಎಸ್‌ಎಸ್‌ನ 100 ವರ್ಷಗಳನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ” ಎಂದು ಹೇಳಿತ್ತು.

ಪ್ರೀತಿ ಗಾಂಧಿ (@MrsGandhi, ಪ್ರಕಾಶ್ ಜಾವ್ಡೇಕರ್ (@PrakashJavdekar) ಮತ್ತು ರಮೇಶ್ ನಾಯ್ಡು ನಗೋತು (@RNagothu) ಮುಂತಾದ ಹಲವಾರು ಇತರ ಎಕ್ಸ್‌ ಬಳಕೆದಾರರು ಮತ್ತು ಬಿಜೆಪಿ ನಾಯಕರು ನೆದರ್‌ಲ್ಯಾಂಡ್‌ ಸರ್ಕಾರ ಆರ್‌ಎಸ್‌ಎಸ್‌ನ ಕೆಲಸವನ್ನು ಗುರುತಿಸಿ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಹೇಳಿಕೊಳ್ಳುವ ವೈರಲ್ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ಮತ್ತು ಅದರ ನಾಯಕರು ಹಂಚಿಕೊಂಡಿರುವ ಪೋಸ್ಟರ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆರ್‌ಎಸ್‌ಎಸ್‌ನ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿಲ್ಲ ಎಂದು ಗೊತ್ತಾಗಿದೆ.

ಈ ಬಗ್ಗೆ ತಿಳಿಯಲು ನಾವು ಮೊದಲು ಈ ಕುರಿತ ಮುಖ್ಯವಾಹಿನಿ ಮಾಧ್ಯಮ ಸುದ್ದಿಗಳನ್ನು ಹುಡುಕಾಡಿದ್ದೇವೆ. ಈ ವೇಳೆ ಯಾವುದೇ ಅಧಿಕೃತ ವರದಿಗಳು ನಮಗೆ ಲಭ್ಯವಾಗಿಲ್ಲ.

ಬಿಜೆಪಿ ನಾಯಕರು ಹಂಚಿಕೊಂಡಿರುವ ಪೋಸ್ಟರ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅದರಲ್ಲಿ “Stichting Hindu Swayamsevak Sangh” ಎಂಬ ಬ್ಯಾಂಕ್ ಖಾತೆಯ ಹೆಸರು ಉಲ್ಲೇಖಿಸಿರುದು ನಮ್ಮ ಗಮನಕ್ಕೆ ಬಂದಿದೆ. ಹಿಂದೂ ಸ್ವಯಂಸೇವಕ ಸಂಘ (HSS) ಆರ್‌ಎಸ್‌ಎಸ್‌ನ ಅಂತಾರಾಷ್ಟ್ರೀಯ ವಿಭಾಗವಾಗಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಯುನೈಟೆಡ್ ಕಿಂಗ್‌ಡಮ್ (ಯುಕೆ) ನೆದರ್‌ಲ್ಯಾಂಡ್ಸ್ ಮುಂತಾದ ಹಲವಾರು ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ.

‘Stichting’ಎಂಬ ಪದವು ಡಚ್ ಭಾಷೆಯಲ್ಲಿ ‘ಸ್ಥಾಪನೆ/ಪ್ರತಿಷ್ಠಾನ’ ಎಂಬ ಅರ್ಥವನ್ನು ನೀಡುತ್ತದೆ. ಈಗಾಗಲೇ ಹೇಳಿದಂತೆ ಪೋಸ್ಟರ್‌ನಲ್ಲಿ ಬಾಕ್ಸ್ ಒಳಗಡೆ ಅಂಚೆ ಚೀಟಿಯನ್ನು ಹೇಗೆ ಆರ್ಡರ್ ಮಾಡುವುದು ಮತ್ತು ಶಿಪ್ಪಿಂಗ್ ಶುಲ್ಕದ ವಿವರಗಳನ್ನು [email protected] ಎಂಬ ಈ-ಮೇಲ್ ಐಡಿಯೊಂದಿಗೆ ನೀಡಲಾಗಿದೆ.

Credit : altnews.in

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಮಾಹಿತಿಯನ್ನು ಆಧರಿಸಿ, ಸಂಬಂಧಿತ ಕೀವರ್ಡ್‌ಗಳ ಮೂಲಕ ಹೆಚ್ಚಿನ ಮಾಹಿತಿ ಹುಡುಕಿದಾಗ ಆರ್‌ಎಸ್‌ಎಸ್‌ನ ಮುಖವಾಣಿ ವಾರಪತ್ರಿಕೆ ‘ಆರ್ಗನೈಸರ್‌’ನ ವರದಿ ಲಭ್ಯವಾಗಿದೆ. ‘ಆರ್‌ಎಸ್‌ಎಸ್ 100ನೇ ವರ್ಷದಲ್ಲಿ: ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ ಸಂಘದ ಶತಮಾನೋತ್ಸವವನ್ನು ಗೌರವಿಸಲು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ” ಎಂದು ವರದಿಗೆ ಶೀರ್ಷಿಕೆ ಕೊಡಲಾಗಿತ್ತು ಮತ್ತು ವೈರಲ್ ಪೋಸ್ಟರ್‌ನಲ್ಲಿರುವ ಎರಡು ಅಂಚೆ ಚೀಟಿಗಳು ವರದಿಯಲ್ಲಿ ಇತ್ತು.

“ಈ ಸ್ಮರಣೀಯ ಮೈಲಿಗಲ್ಲನ್ನು ಗೌರವಿಸಲು, ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್ (HSS NL) ವಿಶ್ವ ಅಂಚೆ ದಿನದಂದು ಹೆಮ್ಮೆಯಿಂದ ವಿಶೇಷ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ- ಇದು ವಿಶ್ವದ ಸಾರ್ವತ್ರಿಕ ಧರ್ಮದ ನೂರು ವರ್ಷಗಳ ಏಕತೆ, ಶಿಸ್ತು ಮತ್ತು ಭಕ್ತಿಯ ಸಂಕೇತವಾಗಿದೆ” ಎಂದು ವರದಿ ಉಲ್ಲೇಖಿಸಿತ್ತು.

ಹೆಚ್ಚುವರಿಯಾಗಿ, ‘PostNl’ಎಂಬ ನೆದರ್‌ಲ್ಯಾಂಡ್ಸ್ ಅಂಚೆ ಸೇವೆಯು ಯಾವುದೇ ಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ವೈಯಕ್ತಿಕ ಅಂಚೆ ಚೀಟಿಗಳನ್ನು ರಚಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಆದ್ದರಿಂದ, ಆರ್‌ಎಸ್‌ಎಸ್‌ನ ಶತಮಾನೋತ್ಸವ ಗೌರವಿಸಲು ನೆದರ್‌ಲ್ಯಾಂಡ್‌ ಸರ್ಕಾರ ಅಧಿಕೃತವಾಗಿ ಯಾವುದೇ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿಲ್ಲ. ಬದಲಾಗಿ, ‘ಹಿಂದೂ ಸ್ವಯಂಸೇವಕ ಸಂಘ ನೆದರ್‌ಲ್ಯಾಂಡ್’ ಸಾರ್ವಜನಿಕರಿಗೆ ಇರುವ ಅವಕಾಶವನ್ನು ಬಳಸಿಕೊಂಡು ಸ್ವತಃ ಆರ್‌ಎಸ್‌ಎಸ್‌ ಅಂಚೆ ಚೀಟಿಯನ್ನು ರಚಿಸಿದೆ ಮತ್ತು ಅದನ್ನು ಮಾರಾಟ ಮಾಡುತ್ತಿದೆ ಎಂಬುದು ನಮ್ಮ ಪರಿಶೀಲನೆಯಲ್ಲಿ ಸ್ಪಷ್ಟವಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...