Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

- Advertisement -
- Advertisement -

ಪ್ರತಿವರ್ಷ ಡಿಸೆಂಬರ್‌ ತಿಂಗಳು ಬಂದರೆ ಸಾಕು, ‘ಜಗತ್ತೇ ನಾಶ’, ‘ಭೂಮಿಯ ಅಂತ್ಯ’ ‘ಪ್ರಳಯ’ ಎಂದೆಲ್ಲಾ ಸುದ್ದಿಗಳು ಓಡಾಡುತ್ತವೆ. ಮಾಧ್ಯಮಗಳು ಕೂಡಾ ಇಂತಹದ್ದೇ ವಿಷಯಗಳನ್ನು ಇಟ್ಟುಕೊಂಡು ದಿನಗಟ್ಟಲೆ ಚರ್ಚಿಸುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ಸಂದೇಶ ಹಾಗೂ ವಿಡಿಯೊ ಹರಿದಾಡಲು ಪ್ರಾರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ವಾಟ್ಸಪ್‌ನಲ್ಲಿ ಇದು ಹರಿದಾಡುತ್ತಿದೆ.

ವೈರಲ್‌ ಸಂದೇಶ

ಮಲಯಾಳಂ ಭಾಷೆಯ ಈ ವಿಡಿಯೊದಲ್ಲಿ ನಿರೂಪಕನೊಬ್ಬ, “ಡಿಸೆಂಬರ್ 13 ರಂದು ಸೂರ್ಯೋದಯ ಆಗುವುದಿಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. 13 ರಂದು ಭೂಮಿ ತನ್ನ ಕಕ್ಷೆಯಲ್ಲಿ ತಿರುಗುವುದಿಲ್ಲ ಎಂದು ನಾಸಾ ಕಂಡುಹಿಡಿದಿದೆ. ಈ ಅಪೂರ್ವ ಘಟನೆಗೆ ತಯಾರಾಗಿರಲು ತನ್ನ ತಂಡಕ್ಕೆ ಅದು ಹೇಳಿದೆ ಎಂದು ವರದಿ ಬರುತ್ತಿದೆ….” ಎಂದು ಅವರು ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಡಿಯೊ ಜೊತೆಗೆ ಕನ್ನಡ ಶೀರ್ಷಿಕೆಯು ಹರಿದಾಡುತ್ತಿದ್ದು, “ಡಿಸೆಂಬರ್ 13 ರಂದು ಸೂರ್ಯ ಉದಯಿಸಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದೆ” ಎಂದು ಅದು ಪ್ರತಿಪಾದಿಸುತ್ತದೆ. ಇದನ್ನು ಫೇಸ್‌ಬುಕ್‌ನಲ್ಲಿ ಕೂಡಾ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಅದನ್ನು ನೀವು ಇಲ್ಲಿ ನೋಡಬಹುದು.

ಮೊದಲೇ ಹೇಳಿದಂತೆ ಈ ರೀತಿಯ ಸುದ್ದಿಗಳು ಪ್ರತಿವರ್ಷ ಡಿಸೆಂಬರ್‌ ತಿಂಗಳಲ್ಲಿ ಓಡಾಡುತ್ತವೆ. ಮಾಧ್ಯಮಗಳಂತೂ ಇಂತಹ ವಿಷಯಗಳನ್ನು ಇಟ್ಟುಕೊಂಡು ಚರ್ಚೆ ಮತ್ತು ಕಾರ್ಯಕ್ರಮ ನಡೆಸಿ ತಮ್ಮ ಟಿಆರ್‌ಪಿ ರೇಟ್‌ ಹೆಚ್ಚಿಸಿಕೊಂಡು ಲಕ್ಷಾಂತರ ದುಡ್ಡನ್ನು ಎಣಿಸಿಕೊಳ್ಳುತ್ತವೆ. ಜನರು ಗಾಬರಿ ಬೀಳುತ್ತಾರೆ. ಆದರೆ ನಮ್ಮ ಭೂಮಿ ಮಾತ್ರ ಈ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಪ್ರಸ್ತುತ ವಾಟ್ಸಪ್‌‌ನಲ್ಲಿ ಹರಿದಾಡುತ್ತಿರುವ ಈ ಸಂದೇಶದ ಮೂಲ ಕೆಲವು ವರ್ಷಗಳ ಹಿಂದಿನ ಮಲಯಾಳಂ ಯೂಟ್ಯೂಬ್‌ ಚಾನೆಲ್‌ನಿಂದ ಬಂದಿದೆ. ಇದರ ಮೂಲ ಚಾನೆಲ್‌ ಮಲಬಾರ್‌ ಆನ್‌ಲೈನ್‌ ಆಗಿದ್ದು ನಾನುಗೌರಿ.ಕಾಂ ಗೆ ಈ ಚಾನೆಲ್‌ ಲಭ್ಯವಾಗಿಲ್ಲ.

ಆದರೆ 2018 ರ ಡಿಸೆಂಬರ್‌ ಮೂರರಂದು Shadshan Chrlary ಎಂಬವರು ಈ ವಿಡಿಯೊವನ್ನು ತಮ್ಮ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ಇದನ್ನು ಈ ಚಾನೆಲ್‌ನಿಂದ ಹೆಚ್ಚು ಜನರು ವೀಕ್ಷಣೆ ಮಾಡಿರಲಿಲ್ಲ. ಜೊತೆಗೆ ಅದೇ ವರ್ಷ ನವೆಂಬರ್‌ ತಿಂಗಳಲ್ಲಿ ಇದೇ ರೀತಿಯ ಸುದ್ದಿಗಳನ್ನು ಮಲಯಾಳಂನ ಇನ್ನೂ ಕೆಲವು ಯೂಟ್ಯೂಬ್‌ ಚಾನೆಲ್‌ಗಳು ವರದಿ ಮಾಡಿದ್ದವು. ಅದನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾಸಾ ಡಿಸೆಂಬರ್‌ ತಿಂಗಳಲ್ಲಿ ಹೀಗೆ ನಡೆಯುತ್ತದೆ ಎಂದು ಹೇಳಿದೆಯ?

ಜಗತ್ತಿನ ಅತ್ಯುನ್ನತ ಬಾಹ್ಯಾಕಾಶ ಅಧ್ಯಯನ ಸಂಸ್ಥೆಯಾದ ‘ನಾಸಾ’ ಡಿಸೆಂಬರ್‌ ತಿಂಗಳ ಯಾವುದಾದರು ದಿನದಂದು ಸೂರ್ಯ ಉದಯಿಸುವುದಿಲ್ಲ ಎಂದು ಹೇಳಿಲ್ಲ. ನಾಸಾ ಈ ರೀತಿಯ ಹೇಳಿಕೆ ನೀಡಿದ್ದರೆ ಜಗತ್ತಿನ ವಿಶ್ವಾಸಾರ್ಹ ಪತ್ರಿಕೆಗಳು ವರದಿ ಮಾಡಿರುತ್ತಿದ್ದವು. ಆದರೆ ಈ ರೀತಿಯಾಗಿ ಯಾವುದೆ ಸುದ್ದಿಗಳು ನಮಗೆ ಸಿಕ್ಕಿಲ್ಲ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಈ ವರದಿಯು ವಿಜ್ಞಾನದ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ತಿಳಿಯದ ವ್ಯಕ್ತಿಗಳು ಮಾಡಿದ್ದಾರೆ. ಅವರು ವಿಡಿಯೊದಲ್ಲಿ, “ಭೂಮಿ ಸೂರ್ಯನ ಸುತ್ತ ತಿರುಗಲು 24 ಗಂಟೆಗಳು ಬೇಕಾಗುತ್ತದೆ” ಎಂದು ಹೇಳುತ್ತಾರೆ. ಆದರೆ ನಿಜವಾಗಿಯು ಭೂಮಿ ಸೂರ್ಯನ ಸುತ್ತಲು ತಿರುಗಲು ಒಂದು ವರ್ಷ (365 ದಿನಗಳು) ಬೇಕಾಗುತ್ತದೆ.

ವಿಡಿಯೊದಲ್ಲಿ ಹೇಳುವ ಪ್ರಕಾರ, ಸೂರ್ಯೋದಯ ಆಗದೇ ಇರುವುದು ಎಂದರೆ ಭೂಮಿ ತನ್ನ ಚಲನೆ 24 ಗಂಟೆಗಳ ಕಾಲ ನಿಲ್ಲಿಸುವುದಾಗಿದೆ. ಆದರೆ ಇದು ಅಸಾಧ್ಯವಾದ ವಿಷಯವಾಗಿದೆ. ಪ್ರಸ್ತುತ ಭೂಮಿಯು ಪ್ರತಿ ಸೆಕೆಂಡಿಗೆ 30 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತದೆ. ಈ ವೇಗದಲ್ಲಿ ಚಲಿಸುತ್ತಿರುವ ಭೂಮಿ ಸಡನ್ನಾಗಿ ನಿಂತರೆ ಏನಾಗಬಹುದು? ನೀವೇ ಊಹಿಸಿ. ಆದ್ದರಿಂದ ಭೂಮಿ ಹೀಗೆ ಸಡನ್ನಾಗಿ ತನ್ನ ಚಲನೆಯನ್ನು ನಿಲ್ಲಿಸುವುದಿಲ್ಲ.

ಭೂಮಿಯ ಚಲನೆ ನಿಧಾನವಾಗುತ್ತಿದೆಯೇ?

ಹೌದು, ವಿಜ್ಞಾನಿಗಳು ಭೂಮಿಯ ಚಲನೆ ನಿಧಾನವಾಗುತ್ತದೆ ಎಂದು ಹೇಳುತ್ತಾರೆ. ಭೂಮಿ ಹುಟ್ಟಿದ ಸುಮಾರು 4.5 ಶತಕೋಟಿ ವರ್ಷಗಳ ಹಿಂದಿನಿಂದ, ಇಂದಿನವರೆಗೂ ಭೂಮಿಯ ತಿರುಗುವಿಕೆ ಕ್ರಮೇಣ ನಿಧಾನವಾಗುತ್ತಿದೆ. ಇದು ಇಂದಿಗೂ ಮುಂದುವರೆದಿರುವ ಪ್ರಕ್ರಿಯೆಯಾಗಿದೆ. ಅಂದಾಜಿನಂತೆ ಭೂಮಿ ತನ್ನ ತಿರುಗುವಿಕೆಯಲ್ಲಿ ಒಂದು ಸೆಕೆಂಡ್‌ ನಿಧಾನ ಆಗಬೇಕೆಂದರೆ ಸುಮಾರು 60 ಸಾವಿರ ವರ್ಷಗಳು ಬೇಕಾಗುತ್ತದೆ.

ನೂರಾರು ಮಿಲಿಯನ್ ವರ್ಷಗಳ ಹಿಂದೆ ಹೋದರೆ, ಅಂದು ಭೂಮಿಯ ಒಂದು ದಿನ ಅಂದರೆ ಕೇವಲ 22 ಗಂಟೆಗಳು ಮಾತ್ರವಾಗಿತ್ತು!. ಈಗ ಅದು 24 ಗಂಟೆಗೆ ಬಂದು ತಲುಪಿದೆ.

ಒಟ್ಟಿನಲ್ಲಿ ಭೂಮಿಯು ತನ್ನ ಚಲನೆಯನ್ನು ತೀರಾ ನಿಧಾನವಾಗಿ ಕಡಿಮೆ ಮಾಡುತ್ತಿದೆ. ಮೇಲೆ ಹೇಳಿದರೆ ಒಂದು ಸೆಕೆಂಡ್ ನಿಧಾನವಾಗಲು 60 ಸಾವಿರ ವರ್ಷಗಳು ಬೇಕು. ಹಾಗಿರುವಾಗ ಭೂಮಿ, ಸೂರ್ಯನ ಸುತ್ತ ಸುತ್ತುವುದನ್ನು ನಿಲ್ಲಿಸುವುದು ಸಾಧ್ಯವೇ ಇಲ್ಲ ಮಾತು. ಹಾಗಾಗಿ ಮೇಲಿನ ‘ಸೂರ್ಯ ಉದಯಿಸುವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರತಿಪಾದನೆ ಸಂಪೂರ್ಣ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಭೂಮಿಯ ಚಲನೆ ನಿಲ್ಲದ ಹಾಗೆ ಏನಾದರೂ ಒಂದು ಹೊಸ ತರಹದ ಹೋಮ ಇರಬಹುದೋ…ಏನೋ….

  2. ಬೆಳಕಾಗಿ ಇರುತ್ತದೆ ಎಲ್ಲೋ ಒಂದು ಕಡೆ ಸೈಕ್ಲೋನ್ ಮಳೆ ಬಾರ ಬಹುದು ಹಾಗ ಬಿಸಿಲೂ ಭೂಮಿ ಗೆ ತಕುವುದಿಲ್ಲಾದ ಕಾರಣ ಈ ವದಂತ್ತಿ ಹಬ್ಬಿರ ಬಹುದು

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...