Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

- Advertisement -
- Advertisement -

ಪ್ರತಿವರ್ಷ ಡಿಸೆಂಬರ್‌ ತಿಂಗಳು ಬಂದರೆ ಸಾಕು, ‘ಜಗತ್ತೇ ನಾಶ’, ‘ಭೂಮಿಯ ಅಂತ್ಯ’ ‘ಪ್ರಳಯ’ ಎಂದೆಲ್ಲಾ ಸುದ್ದಿಗಳು ಓಡಾಡುತ್ತವೆ. ಮಾಧ್ಯಮಗಳು ಕೂಡಾ ಇಂತಹದ್ದೇ ವಿಷಯಗಳನ್ನು ಇಟ್ಟುಕೊಂಡು ದಿನಗಟ್ಟಲೆ ಚರ್ಚಿಸುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ಸಂದೇಶ ಹಾಗೂ ವಿಡಿಯೊ ಹರಿದಾಡಲು ಪ್ರಾರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ವಾಟ್ಸಪ್‌ನಲ್ಲಿ ಇದು ಹರಿದಾಡುತ್ತಿದೆ.

ವೈರಲ್‌ ಸಂದೇಶ

ಮಲಯಾಳಂ ಭಾಷೆಯ ಈ ವಿಡಿಯೊದಲ್ಲಿ ನಿರೂಪಕನೊಬ್ಬ, “ಡಿಸೆಂಬರ್ 13 ರಂದು ಸೂರ್ಯೋದಯ ಆಗುವುದಿಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. 13 ರಂದು ಭೂಮಿ ತನ್ನ ಕಕ್ಷೆಯಲ್ಲಿ ತಿರುಗುವುದಿಲ್ಲ ಎಂದು ನಾಸಾ ಕಂಡುಹಿಡಿದಿದೆ. ಈ ಅಪೂರ್ವ ಘಟನೆಗೆ ತಯಾರಾಗಿರಲು ತನ್ನ ತಂಡಕ್ಕೆ ಅದು ಹೇಳಿದೆ ಎಂದು ವರದಿ ಬರುತ್ತಿದೆ….” ಎಂದು ಅವರು ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಡಿಯೊ ಜೊತೆಗೆ ಕನ್ನಡ ಶೀರ್ಷಿಕೆಯು ಹರಿದಾಡುತ್ತಿದ್ದು, “ಡಿಸೆಂಬರ್ 13 ರಂದು ಸೂರ್ಯ ಉದಯಿಸಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದೆ” ಎಂದು ಅದು ಪ್ರತಿಪಾದಿಸುತ್ತದೆ. ಇದನ್ನು ಫೇಸ್‌ಬುಕ್‌ನಲ್ಲಿ ಕೂಡಾ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಅದನ್ನು ನೀವು ಇಲ್ಲಿ ನೋಡಬಹುದು.

ಮೊದಲೇ ಹೇಳಿದಂತೆ ಈ ರೀತಿಯ ಸುದ್ದಿಗಳು ಪ್ರತಿವರ್ಷ ಡಿಸೆಂಬರ್‌ ತಿಂಗಳಲ್ಲಿ ಓಡಾಡುತ್ತವೆ. ಮಾಧ್ಯಮಗಳಂತೂ ಇಂತಹ ವಿಷಯಗಳನ್ನು ಇಟ್ಟುಕೊಂಡು ಚರ್ಚೆ ಮತ್ತು ಕಾರ್ಯಕ್ರಮ ನಡೆಸಿ ತಮ್ಮ ಟಿಆರ್‌ಪಿ ರೇಟ್‌ ಹೆಚ್ಚಿಸಿಕೊಂಡು ಲಕ್ಷಾಂತರ ದುಡ್ಡನ್ನು ಎಣಿಸಿಕೊಳ್ಳುತ್ತವೆ. ಜನರು ಗಾಬರಿ ಬೀಳುತ್ತಾರೆ. ಆದರೆ ನಮ್ಮ ಭೂಮಿ ಮಾತ್ರ ಈ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಪ್ರಸ್ತುತ ವಾಟ್ಸಪ್‌‌ನಲ್ಲಿ ಹರಿದಾಡುತ್ತಿರುವ ಈ ಸಂದೇಶದ ಮೂಲ ಕೆಲವು ವರ್ಷಗಳ ಹಿಂದಿನ ಮಲಯಾಳಂ ಯೂಟ್ಯೂಬ್‌ ಚಾನೆಲ್‌ನಿಂದ ಬಂದಿದೆ. ಇದರ ಮೂಲ ಚಾನೆಲ್‌ ಮಲಬಾರ್‌ ಆನ್‌ಲೈನ್‌ ಆಗಿದ್ದು ನಾನುಗೌರಿ.ಕಾಂ ಗೆ ಈ ಚಾನೆಲ್‌ ಲಭ್ಯವಾಗಿಲ್ಲ.

ಆದರೆ 2018 ರ ಡಿಸೆಂಬರ್‌ ಮೂರರಂದು Shadshan Chrlary ಎಂಬವರು ಈ ವಿಡಿಯೊವನ್ನು ತಮ್ಮ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ಇದನ್ನು ಈ ಚಾನೆಲ್‌ನಿಂದ ಹೆಚ್ಚು ಜನರು ವೀಕ್ಷಣೆ ಮಾಡಿರಲಿಲ್ಲ. ಜೊತೆಗೆ ಅದೇ ವರ್ಷ ನವೆಂಬರ್‌ ತಿಂಗಳಲ್ಲಿ ಇದೇ ರೀತಿಯ ಸುದ್ದಿಗಳನ್ನು ಮಲಯಾಳಂನ ಇನ್ನೂ ಕೆಲವು ಯೂಟ್ಯೂಬ್‌ ಚಾನೆಲ್‌ಗಳು ವರದಿ ಮಾಡಿದ್ದವು. ಅದನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾಸಾ ಡಿಸೆಂಬರ್‌ ತಿಂಗಳಲ್ಲಿ ಹೀಗೆ ನಡೆಯುತ್ತದೆ ಎಂದು ಹೇಳಿದೆಯ?

ಜಗತ್ತಿನ ಅತ್ಯುನ್ನತ ಬಾಹ್ಯಾಕಾಶ ಅಧ್ಯಯನ ಸಂಸ್ಥೆಯಾದ ‘ನಾಸಾ’ ಡಿಸೆಂಬರ್‌ ತಿಂಗಳ ಯಾವುದಾದರು ದಿನದಂದು ಸೂರ್ಯ ಉದಯಿಸುವುದಿಲ್ಲ ಎಂದು ಹೇಳಿಲ್ಲ. ನಾಸಾ ಈ ರೀತಿಯ ಹೇಳಿಕೆ ನೀಡಿದ್ದರೆ ಜಗತ್ತಿನ ವಿಶ್ವಾಸಾರ್ಹ ಪತ್ರಿಕೆಗಳು ವರದಿ ಮಾಡಿರುತ್ತಿದ್ದವು. ಆದರೆ ಈ ರೀತಿಯಾಗಿ ಯಾವುದೆ ಸುದ್ದಿಗಳು ನಮಗೆ ಸಿಕ್ಕಿಲ್ಲ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಈ ವರದಿಯು ವಿಜ್ಞಾನದ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ತಿಳಿಯದ ವ್ಯಕ್ತಿಗಳು ಮಾಡಿದ್ದಾರೆ. ಅವರು ವಿಡಿಯೊದಲ್ಲಿ, “ಭೂಮಿ ಸೂರ್ಯನ ಸುತ್ತ ತಿರುಗಲು 24 ಗಂಟೆಗಳು ಬೇಕಾಗುತ್ತದೆ” ಎಂದು ಹೇಳುತ್ತಾರೆ. ಆದರೆ ನಿಜವಾಗಿಯು ಭೂಮಿ ಸೂರ್ಯನ ಸುತ್ತಲು ತಿರುಗಲು ಒಂದು ವರ್ಷ (365 ದಿನಗಳು) ಬೇಕಾಗುತ್ತದೆ.

ವಿಡಿಯೊದಲ್ಲಿ ಹೇಳುವ ಪ್ರಕಾರ, ಸೂರ್ಯೋದಯ ಆಗದೇ ಇರುವುದು ಎಂದರೆ ಭೂಮಿ ತನ್ನ ಚಲನೆ 24 ಗಂಟೆಗಳ ಕಾಲ ನಿಲ್ಲಿಸುವುದಾಗಿದೆ. ಆದರೆ ಇದು ಅಸಾಧ್ಯವಾದ ವಿಷಯವಾಗಿದೆ. ಪ್ರಸ್ತುತ ಭೂಮಿಯು ಪ್ರತಿ ಸೆಕೆಂಡಿಗೆ 30 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತದೆ. ಈ ವೇಗದಲ್ಲಿ ಚಲಿಸುತ್ತಿರುವ ಭೂಮಿ ಸಡನ್ನಾಗಿ ನಿಂತರೆ ಏನಾಗಬಹುದು? ನೀವೇ ಊಹಿಸಿ. ಆದ್ದರಿಂದ ಭೂಮಿ ಹೀಗೆ ಸಡನ್ನಾಗಿ ತನ್ನ ಚಲನೆಯನ್ನು ನಿಲ್ಲಿಸುವುದಿಲ್ಲ.

ಭೂಮಿಯ ಚಲನೆ ನಿಧಾನವಾಗುತ್ತಿದೆಯೇ?

ಹೌದು, ವಿಜ್ಞಾನಿಗಳು ಭೂಮಿಯ ಚಲನೆ ನಿಧಾನವಾಗುತ್ತದೆ ಎಂದು ಹೇಳುತ್ತಾರೆ. ಭೂಮಿ ಹುಟ್ಟಿದ ಸುಮಾರು 4.5 ಶತಕೋಟಿ ವರ್ಷಗಳ ಹಿಂದಿನಿಂದ, ಇಂದಿನವರೆಗೂ ಭೂಮಿಯ ತಿರುಗುವಿಕೆ ಕ್ರಮೇಣ ನಿಧಾನವಾಗುತ್ತಿದೆ. ಇದು ಇಂದಿಗೂ ಮುಂದುವರೆದಿರುವ ಪ್ರಕ್ರಿಯೆಯಾಗಿದೆ. ಅಂದಾಜಿನಂತೆ ಭೂಮಿ ತನ್ನ ತಿರುಗುವಿಕೆಯಲ್ಲಿ ಒಂದು ಸೆಕೆಂಡ್‌ ನಿಧಾನ ಆಗಬೇಕೆಂದರೆ ಸುಮಾರು 60 ಸಾವಿರ ವರ್ಷಗಳು ಬೇಕಾಗುತ್ತದೆ.

ನೂರಾರು ಮಿಲಿಯನ್ ವರ್ಷಗಳ ಹಿಂದೆ ಹೋದರೆ, ಅಂದು ಭೂಮಿಯ ಒಂದು ದಿನ ಅಂದರೆ ಕೇವಲ 22 ಗಂಟೆಗಳು ಮಾತ್ರವಾಗಿತ್ತು!. ಈಗ ಅದು 24 ಗಂಟೆಗೆ ಬಂದು ತಲುಪಿದೆ.

ಒಟ್ಟಿನಲ್ಲಿ ಭೂಮಿಯು ತನ್ನ ಚಲನೆಯನ್ನು ತೀರಾ ನಿಧಾನವಾಗಿ ಕಡಿಮೆ ಮಾಡುತ್ತಿದೆ. ಮೇಲೆ ಹೇಳಿದರೆ ಒಂದು ಸೆಕೆಂಡ್ ನಿಧಾನವಾಗಲು 60 ಸಾವಿರ ವರ್ಷಗಳು ಬೇಕು. ಹಾಗಿರುವಾಗ ಭೂಮಿ, ಸೂರ್ಯನ ಸುತ್ತ ಸುತ್ತುವುದನ್ನು ನಿಲ್ಲಿಸುವುದು ಸಾಧ್ಯವೇ ಇಲ್ಲ ಮಾತು. ಹಾಗಾಗಿ ಮೇಲಿನ ‘ಸೂರ್ಯ ಉದಯಿಸುವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರತಿಪಾದನೆ ಸಂಪೂರ್ಣ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಭೂಮಿಯ ಚಲನೆ ನಿಲ್ಲದ ಹಾಗೆ ಏನಾದರೂ ಒಂದು ಹೊಸ ತರಹದ ಹೋಮ ಇರಬಹುದೋ…ಏನೋ….

  2. ಬೆಳಕಾಗಿ ಇರುತ್ತದೆ ಎಲ್ಲೋ ಒಂದು ಕಡೆ ಸೈಕ್ಲೋನ್ ಮಳೆ ಬಾರ ಬಹುದು ಹಾಗ ಬಿಸಿಲೂ ಭೂಮಿ ಗೆ ತಕುವುದಿಲ್ಲಾದ ಕಾರಣ ಈ ವದಂತ್ತಿ ಹಬ್ಬಿರ ಬಹುದು

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...