Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

- Advertisement -
- Advertisement -

ಪ್ರತಿವರ್ಷ ಡಿಸೆಂಬರ್‌ ತಿಂಗಳು ಬಂದರೆ ಸಾಕು, ‘ಜಗತ್ತೇ ನಾಶ’, ‘ಭೂಮಿಯ ಅಂತ್ಯ’ ‘ಪ್ರಳಯ’ ಎಂದೆಲ್ಲಾ ಸುದ್ದಿಗಳು ಓಡಾಡುತ್ತವೆ. ಮಾಧ್ಯಮಗಳು ಕೂಡಾ ಇಂತಹದ್ದೇ ವಿಷಯಗಳನ್ನು ಇಟ್ಟುಕೊಂಡು ದಿನಗಟ್ಟಲೆ ಚರ್ಚಿಸುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ಸಂದೇಶ ಹಾಗೂ ವಿಡಿಯೊ ಹರಿದಾಡಲು ಪ್ರಾರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ವಾಟ್ಸಪ್‌ನಲ್ಲಿ ಇದು ಹರಿದಾಡುತ್ತಿದೆ.

ವೈರಲ್‌ ಸಂದೇಶ

ಮಲಯಾಳಂ ಭಾಷೆಯ ಈ ವಿಡಿಯೊದಲ್ಲಿ ನಿರೂಪಕನೊಬ್ಬ, “ಡಿಸೆಂಬರ್ 13 ರಂದು ಸೂರ್ಯೋದಯ ಆಗುವುದಿಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. 13 ರಂದು ಭೂಮಿ ತನ್ನ ಕಕ್ಷೆಯಲ್ಲಿ ತಿರುಗುವುದಿಲ್ಲ ಎಂದು ನಾಸಾ ಕಂಡುಹಿಡಿದಿದೆ. ಈ ಅಪೂರ್ವ ಘಟನೆಗೆ ತಯಾರಾಗಿರಲು ತನ್ನ ತಂಡಕ್ಕೆ ಅದು ಹೇಳಿದೆ ಎಂದು ವರದಿ ಬರುತ್ತಿದೆ….” ಎಂದು ಅವರು ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಡಿಯೊ ಜೊತೆಗೆ ಕನ್ನಡ ಶೀರ್ಷಿಕೆಯು ಹರಿದಾಡುತ್ತಿದ್ದು, “ಡಿಸೆಂಬರ್ 13 ರಂದು ಸೂರ್ಯ ಉದಯಿಸಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದೆ” ಎಂದು ಅದು ಪ್ರತಿಪಾದಿಸುತ್ತದೆ. ಇದನ್ನು ಫೇಸ್‌ಬುಕ್‌ನಲ್ಲಿ ಕೂಡಾ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಅದನ್ನು ನೀವು ಇಲ್ಲಿ ನೋಡಬಹುದು.

ಮೊದಲೇ ಹೇಳಿದಂತೆ ಈ ರೀತಿಯ ಸುದ್ದಿಗಳು ಪ್ರತಿವರ್ಷ ಡಿಸೆಂಬರ್‌ ತಿಂಗಳಲ್ಲಿ ಓಡಾಡುತ್ತವೆ. ಮಾಧ್ಯಮಗಳಂತೂ ಇಂತಹ ವಿಷಯಗಳನ್ನು ಇಟ್ಟುಕೊಂಡು ಚರ್ಚೆ ಮತ್ತು ಕಾರ್ಯಕ್ರಮ ನಡೆಸಿ ತಮ್ಮ ಟಿಆರ್‌ಪಿ ರೇಟ್‌ ಹೆಚ್ಚಿಸಿಕೊಂಡು ಲಕ್ಷಾಂತರ ದುಡ್ಡನ್ನು ಎಣಿಸಿಕೊಳ್ಳುತ್ತವೆ. ಜನರು ಗಾಬರಿ ಬೀಳುತ್ತಾರೆ. ಆದರೆ ನಮ್ಮ ಭೂಮಿ ಮಾತ್ರ ಈ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಪ್ರಸ್ತುತ ವಾಟ್ಸಪ್‌‌ನಲ್ಲಿ ಹರಿದಾಡುತ್ತಿರುವ ಈ ಸಂದೇಶದ ಮೂಲ ಕೆಲವು ವರ್ಷಗಳ ಹಿಂದಿನ ಮಲಯಾಳಂ ಯೂಟ್ಯೂಬ್‌ ಚಾನೆಲ್‌ನಿಂದ ಬಂದಿದೆ. ಇದರ ಮೂಲ ಚಾನೆಲ್‌ ಮಲಬಾರ್‌ ಆನ್‌ಲೈನ್‌ ಆಗಿದ್ದು ನಾನುಗೌರಿ.ಕಾಂ ಗೆ ಈ ಚಾನೆಲ್‌ ಲಭ್ಯವಾಗಿಲ್ಲ.

ಆದರೆ 2018 ರ ಡಿಸೆಂಬರ್‌ ಮೂರರಂದು Shadshan Chrlary ಎಂಬವರು ಈ ವಿಡಿಯೊವನ್ನು ತಮ್ಮ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ಇದನ್ನು ಈ ಚಾನೆಲ್‌ನಿಂದ ಹೆಚ್ಚು ಜನರು ವೀಕ್ಷಣೆ ಮಾಡಿರಲಿಲ್ಲ. ಜೊತೆಗೆ ಅದೇ ವರ್ಷ ನವೆಂಬರ್‌ ತಿಂಗಳಲ್ಲಿ ಇದೇ ರೀತಿಯ ಸುದ್ದಿಗಳನ್ನು ಮಲಯಾಳಂನ ಇನ್ನೂ ಕೆಲವು ಯೂಟ್ಯೂಬ್‌ ಚಾನೆಲ್‌ಗಳು ವರದಿ ಮಾಡಿದ್ದವು. ಅದನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾಸಾ ಡಿಸೆಂಬರ್‌ ತಿಂಗಳಲ್ಲಿ ಹೀಗೆ ನಡೆಯುತ್ತದೆ ಎಂದು ಹೇಳಿದೆಯ?

ಜಗತ್ತಿನ ಅತ್ಯುನ್ನತ ಬಾಹ್ಯಾಕಾಶ ಅಧ್ಯಯನ ಸಂಸ್ಥೆಯಾದ ‘ನಾಸಾ’ ಡಿಸೆಂಬರ್‌ ತಿಂಗಳ ಯಾವುದಾದರು ದಿನದಂದು ಸೂರ್ಯ ಉದಯಿಸುವುದಿಲ್ಲ ಎಂದು ಹೇಳಿಲ್ಲ. ನಾಸಾ ಈ ರೀತಿಯ ಹೇಳಿಕೆ ನೀಡಿದ್ದರೆ ಜಗತ್ತಿನ ವಿಶ್ವಾಸಾರ್ಹ ಪತ್ರಿಕೆಗಳು ವರದಿ ಮಾಡಿರುತ್ತಿದ್ದವು. ಆದರೆ ಈ ರೀತಿಯಾಗಿ ಯಾವುದೆ ಸುದ್ದಿಗಳು ನಮಗೆ ಸಿಕ್ಕಿಲ್ಲ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಈ ವರದಿಯು ವಿಜ್ಞಾನದ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ತಿಳಿಯದ ವ್ಯಕ್ತಿಗಳು ಮಾಡಿದ್ದಾರೆ. ಅವರು ವಿಡಿಯೊದಲ್ಲಿ, “ಭೂಮಿ ಸೂರ್ಯನ ಸುತ್ತ ತಿರುಗಲು 24 ಗಂಟೆಗಳು ಬೇಕಾಗುತ್ತದೆ” ಎಂದು ಹೇಳುತ್ತಾರೆ. ಆದರೆ ನಿಜವಾಗಿಯು ಭೂಮಿ ಸೂರ್ಯನ ಸುತ್ತಲು ತಿರುಗಲು ಒಂದು ವರ್ಷ (365 ದಿನಗಳು) ಬೇಕಾಗುತ್ತದೆ.

ವಿಡಿಯೊದಲ್ಲಿ ಹೇಳುವ ಪ್ರಕಾರ, ಸೂರ್ಯೋದಯ ಆಗದೇ ಇರುವುದು ಎಂದರೆ ಭೂಮಿ ತನ್ನ ಚಲನೆ 24 ಗಂಟೆಗಳ ಕಾಲ ನಿಲ್ಲಿಸುವುದಾಗಿದೆ. ಆದರೆ ಇದು ಅಸಾಧ್ಯವಾದ ವಿಷಯವಾಗಿದೆ. ಪ್ರಸ್ತುತ ಭೂಮಿಯು ಪ್ರತಿ ಸೆಕೆಂಡಿಗೆ 30 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತದೆ. ಈ ವೇಗದಲ್ಲಿ ಚಲಿಸುತ್ತಿರುವ ಭೂಮಿ ಸಡನ್ನಾಗಿ ನಿಂತರೆ ಏನಾಗಬಹುದು? ನೀವೇ ಊಹಿಸಿ. ಆದ್ದರಿಂದ ಭೂಮಿ ಹೀಗೆ ಸಡನ್ನಾಗಿ ತನ್ನ ಚಲನೆಯನ್ನು ನಿಲ್ಲಿಸುವುದಿಲ್ಲ.

ಭೂಮಿಯ ಚಲನೆ ನಿಧಾನವಾಗುತ್ತಿದೆಯೇ?

ಹೌದು, ವಿಜ್ಞಾನಿಗಳು ಭೂಮಿಯ ಚಲನೆ ನಿಧಾನವಾಗುತ್ತದೆ ಎಂದು ಹೇಳುತ್ತಾರೆ. ಭೂಮಿ ಹುಟ್ಟಿದ ಸುಮಾರು 4.5 ಶತಕೋಟಿ ವರ್ಷಗಳ ಹಿಂದಿನಿಂದ, ಇಂದಿನವರೆಗೂ ಭೂಮಿಯ ತಿರುಗುವಿಕೆ ಕ್ರಮೇಣ ನಿಧಾನವಾಗುತ್ತಿದೆ. ಇದು ಇಂದಿಗೂ ಮುಂದುವರೆದಿರುವ ಪ್ರಕ್ರಿಯೆಯಾಗಿದೆ. ಅಂದಾಜಿನಂತೆ ಭೂಮಿ ತನ್ನ ತಿರುಗುವಿಕೆಯಲ್ಲಿ ಒಂದು ಸೆಕೆಂಡ್‌ ನಿಧಾನ ಆಗಬೇಕೆಂದರೆ ಸುಮಾರು 60 ಸಾವಿರ ವರ್ಷಗಳು ಬೇಕಾಗುತ್ತದೆ.

ನೂರಾರು ಮಿಲಿಯನ್ ವರ್ಷಗಳ ಹಿಂದೆ ಹೋದರೆ, ಅಂದು ಭೂಮಿಯ ಒಂದು ದಿನ ಅಂದರೆ ಕೇವಲ 22 ಗಂಟೆಗಳು ಮಾತ್ರವಾಗಿತ್ತು!. ಈಗ ಅದು 24 ಗಂಟೆಗೆ ಬಂದು ತಲುಪಿದೆ.

ಒಟ್ಟಿನಲ್ಲಿ ಭೂಮಿಯು ತನ್ನ ಚಲನೆಯನ್ನು ತೀರಾ ನಿಧಾನವಾಗಿ ಕಡಿಮೆ ಮಾಡುತ್ತಿದೆ. ಮೇಲೆ ಹೇಳಿದರೆ ಒಂದು ಸೆಕೆಂಡ್ ನಿಧಾನವಾಗಲು 60 ಸಾವಿರ ವರ್ಷಗಳು ಬೇಕು. ಹಾಗಿರುವಾಗ ಭೂಮಿ, ಸೂರ್ಯನ ಸುತ್ತ ಸುತ್ತುವುದನ್ನು ನಿಲ್ಲಿಸುವುದು ಸಾಧ್ಯವೇ ಇಲ್ಲ ಮಾತು. ಹಾಗಾಗಿ ಮೇಲಿನ ‘ಸೂರ್ಯ ಉದಯಿಸುವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರತಿಪಾದನೆ ಸಂಪೂರ್ಣ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಭೂಮಿಯ ಚಲನೆ ನಿಲ್ಲದ ಹಾಗೆ ಏನಾದರೂ ಒಂದು ಹೊಸ ತರಹದ ಹೋಮ ಇರಬಹುದೋ…ಏನೋ….

  2. ಬೆಳಕಾಗಿ ಇರುತ್ತದೆ ಎಲ್ಲೋ ಒಂದು ಕಡೆ ಸೈಕ್ಲೋನ್ ಮಳೆ ಬಾರ ಬಹುದು ಹಾಗ ಬಿಸಿಲೂ ಭೂಮಿ ಗೆ ತಕುವುದಿಲ್ಲಾದ ಕಾರಣ ಈ ವದಂತ್ತಿ ಹಬ್ಬಿರ ಬಹುದು

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...