Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

ಫ್ಯಾಕ್ಟ್‌‌ಚೆಕ್‌: ‘ಡಿಸೆಂಬರ್‌ 13 ರಂದು ಸೂರ್ಯ ಉದಯಸುವುದಿಲ್ಲ’ ಎಂಬುದು ನಿಜವೇ?

- Advertisement -
- Advertisement -

ಪ್ರತಿವರ್ಷ ಡಿಸೆಂಬರ್‌ ತಿಂಗಳು ಬಂದರೆ ಸಾಕು, ‘ಜಗತ್ತೇ ನಾಶ’, ‘ಭೂಮಿಯ ಅಂತ್ಯ’ ‘ಪ್ರಳಯ’ ಎಂದೆಲ್ಲಾ ಸುದ್ದಿಗಳು ಓಡಾಡುತ್ತವೆ. ಮಾಧ್ಯಮಗಳು ಕೂಡಾ ಇಂತಹದ್ದೇ ವಿಷಯಗಳನ್ನು ಇಟ್ಟುಕೊಂಡು ದಿನಗಟ್ಟಲೆ ಚರ್ಚಿಸುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ಸಂದೇಶ ಹಾಗೂ ವಿಡಿಯೊ ಹರಿದಾಡಲು ಪ್ರಾರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ವಾಟ್ಸಪ್‌ನಲ್ಲಿ ಇದು ಹರಿದಾಡುತ್ತಿದೆ.

ವೈರಲ್‌ ಸಂದೇಶ

ಮಲಯಾಳಂ ಭಾಷೆಯ ಈ ವಿಡಿಯೊದಲ್ಲಿ ನಿರೂಪಕನೊಬ್ಬ, “ಡಿಸೆಂಬರ್ 13 ರಂದು ಸೂರ್ಯೋದಯ ಆಗುವುದಿಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. 13 ರಂದು ಭೂಮಿ ತನ್ನ ಕಕ್ಷೆಯಲ್ಲಿ ತಿರುಗುವುದಿಲ್ಲ ಎಂದು ನಾಸಾ ಕಂಡುಹಿಡಿದಿದೆ. ಈ ಅಪೂರ್ವ ಘಟನೆಗೆ ತಯಾರಾಗಿರಲು ತನ್ನ ತಂಡಕ್ಕೆ ಅದು ಹೇಳಿದೆ ಎಂದು ವರದಿ ಬರುತ್ತಿದೆ….” ಎಂದು ಅವರು ಹೇಳುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಡಿಯೊ ಜೊತೆಗೆ ಕನ್ನಡ ಶೀರ್ಷಿಕೆಯು ಹರಿದಾಡುತ್ತಿದ್ದು, “ಡಿಸೆಂಬರ್ 13 ರಂದು ಸೂರ್ಯ ಉದಯಿಸಲ್ಲ ಎಂದು ನಾಸಾ ವಿಜ್ಞಾನಿಗಳು ಮುನ್ನೆಚ್ಚರಿಕೆ ನೀಡಿದೆ” ಎಂದು ಅದು ಪ್ರತಿಪಾದಿಸುತ್ತದೆ. ಇದನ್ನು ಫೇಸ್‌ಬುಕ್‌ನಲ್ಲಿ ಕೂಡಾ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಅದನ್ನು ನೀವು ಇಲ್ಲಿ ನೋಡಬಹುದು.

ಮೊದಲೇ ಹೇಳಿದಂತೆ ಈ ರೀತಿಯ ಸುದ್ದಿಗಳು ಪ್ರತಿವರ್ಷ ಡಿಸೆಂಬರ್‌ ತಿಂಗಳಲ್ಲಿ ಓಡಾಡುತ್ತವೆ. ಮಾಧ್ಯಮಗಳಂತೂ ಇಂತಹ ವಿಷಯಗಳನ್ನು ಇಟ್ಟುಕೊಂಡು ಚರ್ಚೆ ಮತ್ತು ಕಾರ್ಯಕ್ರಮ ನಡೆಸಿ ತಮ್ಮ ಟಿಆರ್‌ಪಿ ರೇಟ್‌ ಹೆಚ್ಚಿಸಿಕೊಂಡು ಲಕ್ಷಾಂತರ ದುಡ್ಡನ್ನು ಎಣಿಸಿಕೊಳ್ಳುತ್ತವೆ. ಜನರು ಗಾಬರಿ ಬೀಳುತ್ತಾರೆ. ಆದರೆ ನಮ್ಮ ಭೂಮಿ ಮಾತ್ರ ಈ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ತನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಪ್ರಸ್ತುತ ವಾಟ್ಸಪ್‌‌ನಲ್ಲಿ ಹರಿದಾಡುತ್ತಿರುವ ಈ ಸಂದೇಶದ ಮೂಲ ಕೆಲವು ವರ್ಷಗಳ ಹಿಂದಿನ ಮಲಯಾಳಂ ಯೂಟ್ಯೂಬ್‌ ಚಾನೆಲ್‌ನಿಂದ ಬಂದಿದೆ. ಇದರ ಮೂಲ ಚಾನೆಲ್‌ ಮಲಬಾರ್‌ ಆನ್‌ಲೈನ್‌ ಆಗಿದ್ದು ನಾನುಗೌರಿ.ಕಾಂ ಗೆ ಈ ಚಾನೆಲ್‌ ಲಭ್ಯವಾಗಿಲ್ಲ.

ಆದರೆ 2018 ರ ಡಿಸೆಂಬರ್‌ ಮೂರರಂದು Shadshan Chrlary ಎಂಬವರು ಈ ವಿಡಿಯೊವನ್ನು ತಮ್ಮ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ಇದನ್ನು ಈ ಚಾನೆಲ್‌ನಿಂದ ಹೆಚ್ಚು ಜನರು ವೀಕ್ಷಣೆ ಮಾಡಿರಲಿಲ್ಲ. ಜೊತೆಗೆ ಅದೇ ವರ್ಷ ನವೆಂಬರ್‌ ತಿಂಗಳಲ್ಲಿ ಇದೇ ರೀತಿಯ ಸುದ್ದಿಗಳನ್ನು ಮಲಯಾಳಂನ ಇನ್ನೂ ಕೆಲವು ಯೂಟ್ಯೂಬ್‌ ಚಾನೆಲ್‌ಗಳು ವರದಿ ಮಾಡಿದ್ದವು. ಅದನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾಸಾ ಡಿಸೆಂಬರ್‌ ತಿಂಗಳಲ್ಲಿ ಹೀಗೆ ನಡೆಯುತ್ತದೆ ಎಂದು ಹೇಳಿದೆಯ?

ಜಗತ್ತಿನ ಅತ್ಯುನ್ನತ ಬಾಹ್ಯಾಕಾಶ ಅಧ್ಯಯನ ಸಂಸ್ಥೆಯಾದ ‘ನಾಸಾ’ ಡಿಸೆಂಬರ್‌ ತಿಂಗಳ ಯಾವುದಾದರು ದಿನದಂದು ಸೂರ್ಯ ಉದಯಿಸುವುದಿಲ್ಲ ಎಂದು ಹೇಳಿಲ್ಲ. ನಾಸಾ ಈ ರೀತಿಯ ಹೇಳಿಕೆ ನೀಡಿದ್ದರೆ ಜಗತ್ತಿನ ವಿಶ್ವಾಸಾರ್ಹ ಪತ್ರಿಕೆಗಳು ವರದಿ ಮಾಡಿರುತ್ತಿದ್ದವು. ಆದರೆ ಈ ರೀತಿಯಾಗಿ ಯಾವುದೆ ಸುದ್ದಿಗಳು ನಮಗೆ ಸಿಕ್ಕಿಲ್ಲ.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಈ ವರದಿಯು ವಿಜ್ಞಾನದ ಬಗ್ಗೆ ಸಾಮಾನ್ಯ ಜ್ಞಾನ ಕೂಡಾ ತಿಳಿಯದ ವ್ಯಕ್ತಿಗಳು ಮಾಡಿದ್ದಾರೆ. ಅವರು ವಿಡಿಯೊದಲ್ಲಿ, “ಭೂಮಿ ಸೂರ್ಯನ ಸುತ್ತ ತಿರುಗಲು 24 ಗಂಟೆಗಳು ಬೇಕಾಗುತ್ತದೆ” ಎಂದು ಹೇಳುತ್ತಾರೆ. ಆದರೆ ನಿಜವಾಗಿಯು ಭೂಮಿ ಸೂರ್ಯನ ಸುತ್ತಲು ತಿರುಗಲು ಒಂದು ವರ್ಷ (365 ದಿನಗಳು) ಬೇಕಾಗುತ್ತದೆ.

ವಿಡಿಯೊದಲ್ಲಿ ಹೇಳುವ ಪ್ರಕಾರ, ಸೂರ್ಯೋದಯ ಆಗದೇ ಇರುವುದು ಎಂದರೆ ಭೂಮಿ ತನ್ನ ಚಲನೆ 24 ಗಂಟೆಗಳ ಕಾಲ ನಿಲ್ಲಿಸುವುದಾಗಿದೆ. ಆದರೆ ಇದು ಅಸಾಧ್ಯವಾದ ವಿಷಯವಾಗಿದೆ. ಪ್ರಸ್ತುತ ಭೂಮಿಯು ಪ್ರತಿ ಸೆಕೆಂಡಿಗೆ 30 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತದೆ. ಈ ವೇಗದಲ್ಲಿ ಚಲಿಸುತ್ತಿರುವ ಭೂಮಿ ಸಡನ್ನಾಗಿ ನಿಂತರೆ ಏನಾಗಬಹುದು? ನೀವೇ ಊಹಿಸಿ. ಆದ್ದರಿಂದ ಭೂಮಿ ಹೀಗೆ ಸಡನ್ನಾಗಿ ತನ್ನ ಚಲನೆಯನ್ನು ನಿಲ್ಲಿಸುವುದಿಲ್ಲ.

ಭೂಮಿಯ ಚಲನೆ ನಿಧಾನವಾಗುತ್ತಿದೆಯೇ?

ಹೌದು, ವಿಜ್ಞಾನಿಗಳು ಭೂಮಿಯ ಚಲನೆ ನಿಧಾನವಾಗುತ್ತದೆ ಎಂದು ಹೇಳುತ್ತಾರೆ. ಭೂಮಿ ಹುಟ್ಟಿದ ಸುಮಾರು 4.5 ಶತಕೋಟಿ ವರ್ಷಗಳ ಹಿಂದಿನಿಂದ, ಇಂದಿನವರೆಗೂ ಭೂಮಿಯ ತಿರುಗುವಿಕೆ ಕ್ರಮೇಣ ನಿಧಾನವಾಗುತ್ತಿದೆ. ಇದು ಇಂದಿಗೂ ಮುಂದುವರೆದಿರುವ ಪ್ರಕ್ರಿಯೆಯಾಗಿದೆ. ಅಂದಾಜಿನಂತೆ ಭೂಮಿ ತನ್ನ ತಿರುಗುವಿಕೆಯಲ್ಲಿ ಒಂದು ಸೆಕೆಂಡ್‌ ನಿಧಾನ ಆಗಬೇಕೆಂದರೆ ಸುಮಾರು 60 ಸಾವಿರ ವರ್ಷಗಳು ಬೇಕಾಗುತ್ತದೆ.

ನೂರಾರು ಮಿಲಿಯನ್ ವರ್ಷಗಳ ಹಿಂದೆ ಹೋದರೆ, ಅಂದು ಭೂಮಿಯ ಒಂದು ದಿನ ಅಂದರೆ ಕೇವಲ 22 ಗಂಟೆಗಳು ಮಾತ್ರವಾಗಿತ್ತು!. ಈಗ ಅದು 24 ಗಂಟೆಗೆ ಬಂದು ತಲುಪಿದೆ.

ಒಟ್ಟಿನಲ್ಲಿ ಭೂಮಿಯು ತನ್ನ ಚಲನೆಯನ್ನು ತೀರಾ ನಿಧಾನವಾಗಿ ಕಡಿಮೆ ಮಾಡುತ್ತಿದೆ. ಮೇಲೆ ಹೇಳಿದರೆ ಒಂದು ಸೆಕೆಂಡ್ ನಿಧಾನವಾಗಲು 60 ಸಾವಿರ ವರ್ಷಗಳು ಬೇಕು. ಹಾಗಿರುವಾಗ ಭೂಮಿ, ಸೂರ್ಯನ ಸುತ್ತ ಸುತ್ತುವುದನ್ನು ನಿಲ್ಲಿಸುವುದು ಸಾಧ್ಯವೇ ಇಲ್ಲ ಮಾತು. ಹಾಗಾಗಿ ಮೇಲಿನ ‘ಸೂರ್ಯ ಉದಯಿಸುವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರತಿಪಾದನೆ ಸಂಪೂರ್ಣ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಭೂಮಿಯ ಚಲನೆ ನಿಲ್ಲದ ಹಾಗೆ ಏನಾದರೂ ಒಂದು ಹೊಸ ತರಹದ ಹೋಮ ಇರಬಹುದೋ…ಏನೋ….

  2. ಬೆಳಕಾಗಿ ಇರುತ್ತದೆ ಎಲ್ಲೋ ಒಂದು ಕಡೆ ಸೈಕ್ಲೋನ್ ಮಳೆ ಬಾರ ಬಹುದು ಹಾಗ ಬಿಸಿಲೂ ಭೂಮಿ ಗೆ ತಕುವುದಿಲ್ಲಾದ ಕಾರಣ ಈ ವದಂತ್ತಿ ಹಬ್ಬಿರ ಬಹುದು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...