Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...