Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...