Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...