Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...