Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...