Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...