Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...