Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...