Homeಫ್ಯಾಕ್ಟ್‌ಚೆಕ್FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ...

FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

- Advertisement -
- Advertisement -

“ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ” ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಾಟ್ಸಾಪ್ ನಲ್ಲಿ ಕಂಡು ಬಂದ ಮೆಸೇಜ್‌ನಲ್ಲಿ “ನಿಮ್ಮ ಮನೆಯಿಂದ 60 ಕಿಮೀ ದೂರದೊಳಗೆ ಯಾವುದೇ ಟೋಲ್ ಬೂತ್ ಇದ್ದರೂ ಆ ಬೂತಲ್ಲಿ ಟೋಲ್ ಫೀ ಕಟ್ಟುವಂತಿಲ್ಲ. ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ಮೂಲಕ ಪಾಸ್ ಮಾಡಿಸಿಕೊಳ್ಳತಕ್ಕದ್ದು. ಇದನ್ನು ಹೆಚ್ಚು ಫಾರ್ವರ್ಡ್ ಮಾಡಿ ಜನರಿಗೆ ತಿಳಿಸುವ ಕೆಲಸ ಮಾಡಿ. ಇದು ಕೇಂದ್ರ ಸರಕಾರದ ಆಜ್ಞೆ” ಎಂದು ಬರೆಯಲಾಗಿದೆ. ಜೊತೆಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ನಿತಿನ್ ಗಡ್ಕರಿ ಹೇಳಿಕೆಯ ಪೂರ್ಣ ವಿಡಿಯೋ ಲಭ್ಯವಾಗಿದೆ. ಅದರಲ್ಲಿ 0.36 ಸೆಕೆಂಡಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಲೋಕಸಭೆಯಲ್ಲಿ ನೀಡಿರುವ ಹೇಳಿಕೆ ಹೀಗಿದೆ “ಸ್ಥಳೀಯ ಜನರು ಅವರ ಆಧಾರ್ ಕಾರ್ಡ್ ತೋರಿಸಿದರೆ ಪಾಸ್ ನೀಡಲಾಗುವುದು. ಎರಡನೆಯ ವಿಷಯವೆಂದರೆ 60 ಕಿಮೀ ದೂರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾಗಳು ಇರುವಂತಿಲ್ಲ, ಒಂದು ವೇಳೆ ಇದ್ದರೆ ಅದು ಕಾನೂನು ಬಾಹಿರವಾಗಿದೆ ಮತ್ತು ಅದನ್ನು ಪರಿಶೀಲಿಸಿ ಮೂರು ತಿಂಗಳೊಳಗೆ ತೆಗೆದುಹಾಕಲಾಗುವುದು.”

ಈ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ “ಮಾರ್ಚ್ 22, 2022ರಂದು ಡೆಕ್ಕನ್ ಹೆರಾಲ್ಡ್ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯಲ್ಲಿ “ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಸ್ಪರ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಪ್ಲಾಝಾಗಳನ್ನು ಮುಂದಿನ ಮೂರು ತಿಂಗಳಲ್ಲಿ ತೆಗೆದು ಹಾಕಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ” ಎಂದಿದೆ.

ಇದೇ ವರದಿಯಲ್ಲಿ “ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಟೋಲ್ ಪ್ಲಾಜಾಗಳ ಬಳಿ ಇರುವ ಸ್ಥಳೀಯ ನಿವಾಸಿಗಳಿಗೆ ಅವರ ಆಧಾರ್ ಕಾರ್ಡ್ ವಿಳಾಸವನ್ನು ಆಧರಿಸಿ ಸರ್ಕಾರ ಉಚಿತ ಪಾಸ್‌ಗಳನ್ನು ನೀಡುತ್ತದೆ ಎಂದು ಗಡ್ಕರಿ ಹೇಳಿದರು. ಲೋಕಸಭೆಯಲ್ಲಿ ಮುಂದಿನ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆ ಕುರಿತ ಚರ್ಚೆಗೆ ಉತ್ತರಿಸಿದರು” ಎಂದು ಹೇಳಲಾಗಿದೆ.

ಮಾರ್ಚ್ 22, 2023ರಂದು ಪ್ರಕಟಗೊಂಡ ದಿ ಹಿಂದೂ ವರದಿಯಲ್ಲಿ, “ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿ.ಮೀ ದೂರಕ್ಕೆ ಒಂದೇ ಟೋಲ್ ಪ್ಲಾಝಾ ಇರಲಿದ್ದು, ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಝಾಗಳಿದ್ದರೆ ಮುಂದಿನ ಮೂರು ತಿಂಗಳಲ್ಲಿ ಅಂತವುಗಳನ್ನು ಮುಚ್ಚಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಲೋಕಸಭೆಯಲ್ಲಿ ಘೋಷಿಸಿದ್ದಾರೆ” ಎಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಪ್ಲಾಝಾ ವ್ಯಾಪ್ತಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ. ಇದು ವೈರಲ್‌ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಆದರೆ, ವಿಡಿಯೋ ಜೊತೆಗೆ ಹಂಚಿಕೊಳ್ಳಲಾದ ಹೇಳಿಕೆಯಲ್ಲಿ ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಗೇಟ್ ಇದ್ದರೂ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಹೇಳಿರುವುದು ಸುಳ್ಳು ಪ್ರತಿಪಾದನೆಯಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...