Homeಫ್ಯಾಕ್ಟ್‌ಚೆಕ್FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ...

FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

- Advertisement -
- Advertisement -

“ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ” ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಾಟ್ಸಾಪ್ ನಲ್ಲಿ ಕಂಡು ಬಂದ ಮೆಸೇಜ್‌ನಲ್ಲಿ “ನಿಮ್ಮ ಮನೆಯಿಂದ 60 ಕಿಮೀ ದೂರದೊಳಗೆ ಯಾವುದೇ ಟೋಲ್ ಬೂತ್ ಇದ್ದರೂ ಆ ಬೂತಲ್ಲಿ ಟೋಲ್ ಫೀ ಕಟ್ಟುವಂತಿಲ್ಲ. ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ಮೂಲಕ ಪಾಸ್ ಮಾಡಿಸಿಕೊಳ್ಳತಕ್ಕದ್ದು. ಇದನ್ನು ಹೆಚ್ಚು ಫಾರ್ವರ್ಡ್ ಮಾಡಿ ಜನರಿಗೆ ತಿಳಿಸುವ ಕೆಲಸ ಮಾಡಿ. ಇದು ಕೇಂದ್ರ ಸರಕಾರದ ಆಜ್ಞೆ” ಎಂದು ಬರೆಯಲಾಗಿದೆ. ಜೊತೆಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ನಿತಿನ್ ಗಡ್ಕರಿ ಹೇಳಿಕೆಯ ಪೂರ್ಣ ವಿಡಿಯೋ ಲಭ್ಯವಾಗಿದೆ. ಅದರಲ್ಲಿ 0.36 ಸೆಕೆಂಡಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಲೋಕಸಭೆಯಲ್ಲಿ ನೀಡಿರುವ ಹೇಳಿಕೆ ಹೀಗಿದೆ “ಸ್ಥಳೀಯ ಜನರು ಅವರ ಆಧಾರ್ ಕಾರ್ಡ್ ತೋರಿಸಿದರೆ ಪಾಸ್ ನೀಡಲಾಗುವುದು. ಎರಡನೆಯ ವಿಷಯವೆಂದರೆ 60 ಕಿಮೀ ದೂರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾಗಳು ಇರುವಂತಿಲ್ಲ, ಒಂದು ವೇಳೆ ಇದ್ದರೆ ಅದು ಕಾನೂನು ಬಾಹಿರವಾಗಿದೆ ಮತ್ತು ಅದನ್ನು ಪರಿಶೀಲಿಸಿ ಮೂರು ತಿಂಗಳೊಳಗೆ ತೆಗೆದುಹಾಕಲಾಗುವುದು.”

ಈ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ “ಮಾರ್ಚ್ 22, 2022ರಂದು ಡೆಕ್ಕನ್ ಹೆರಾಲ್ಡ್ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯಲ್ಲಿ “ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಸ್ಪರ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಪ್ಲಾಝಾಗಳನ್ನು ಮುಂದಿನ ಮೂರು ತಿಂಗಳಲ್ಲಿ ತೆಗೆದು ಹಾಕಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ” ಎಂದಿದೆ.

ಇದೇ ವರದಿಯಲ್ಲಿ “ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಟೋಲ್ ಪ್ಲಾಜಾಗಳ ಬಳಿ ಇರುವ ಸ್ಥಳೀಯ ನಿವಾಸಿಗಳಿಗೆ ಅವರ ಆಧಾರ್ ಕಾರ್ಡ್ ವಿಳಾಸವನ್ನು ಆಧರಿಸಿ ಸರ್ಕಾರ ಉಚಿತ ಪಾಸ್‌ಗಳನ್ನು ನೀಡುತ್ತದೆ ಎಂದು ಗಡ್ಕರಿ ಹೇಳಿದರು. ಲೋಕಸಭೆಯಲ್ಲಿ ಮುಂದಿನ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆ ಕುರಿತ ಚರ್ಚೆಗೆ ಉತ್ತರಿಸಿದರು” ಎಂದು ಹೇಳಲಾಗಿದೆ.

ಮಾರ್ಚ್ 22, 2023ರಂದು ಪ್ರಕಟಗೊಂಡ ದಿ ಹಿಂದೂ ವರದಿಯಲ್ಲಿ, “ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿ.ಮೀ ದೂರಕ್ಕೆ ಒಂದೇ ಟೋಲ್ ಪ್ಲಾಝಾ ಇರಲಿದ್ದು, ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಝಾಗಳಿದ್ದರೆ ಮುಂದಿನ ಮೂರು ತಿಂಗಳಲ್ಲಿ ಅಂತವುಗಳನ್ನು ಮುಚ್ಚಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಲೋಕಸಭೆಯಲ್ಲಿ ಘೋಷಿಸಿದ್ದಾರೆ” ಎಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಪ್ಲಾಝಾ ವ್ಯಾಪ್ತಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ. ಇದು ವೈರಲ್‌ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಆದರೆ, ವಿಡಿಯೋ ಜೊತೆಗೆ ಹಂಚಿಕೊಳ್ಳಲಾದ ಹೇಳಿಕೆಯಲ್ಲಿ ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಗೇಟ್ ಇದ್ದರೂ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಹೇಳಿರುವುದು ಸುಳ್ಳು ಪ್ರತಿಪಾದನೆಯಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...