Homeಫ್ಯಾಕ್ಟ್‌ಚೆಕ್FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ...

FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

- Advertisement -
- Advertisement -

“ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ” ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಾಟ್ಸಾಪ್ ನಲ್ಲಿ ಕಂಡು ಬಂದ ಮೆಸೇಜ್‌ನಲ್ಲಿ “ನಿಮ್ಮ ಮನೆಯಿಂದ 60 ಕಿಮೀ ದೂರದೊಳಗೆ ಯಾವುದೇ ಟೋಲ್ ಬೂತ್ ಇದ್ದರೂ ಆ ಬೂತಲ್ಲಿ ಟೋಲ್ ಫೀ ಕಟ್ಟುವಂತಿಲ್ಲ. ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ಮೂಲಕ ಪಾಸ್ ಮಾಡಿಸಿಕೊಳ್ಳತಕ್ಕದ್ದು. ಇದನ್ನು ಹೆಚ್ಚು ಫಾರ್ವರ್ಡ್ ಮಾಡಿ ಜನರಿಗೆ ತಿಳಿಸುವ ಕೆಲಸ ಮಾಡಿ. ಇದು ಕೇಂದ್ರ ಸರಕಾರದ ಆಜ್ಞೆ” ಎಂದು ಬರೆಯಲಾಗಿದೆ. ಜೊತೆಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ನಿತಿನ್ ಗಡ್ಕರಿ ಹೇಳಿಕೆಯ ಪೂರ್ಣ ವಿಡಿಯೋ ಲಭ್ಯವಾಗಿದೆ. ಅದರಲ್ಲಿ 0.36 ಸೆಕೆಂಡಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಲೋಕಸಭೆಯಲ್ಲಿ ನೀಡಿರುವ ಹೇಳಿಕೆ ಹೀಗಿದೆ “ಸ್ಥಳೀಯ ಜನರು ಅವರ ಆಧಾರ್ ಕಾರ್ಡ್ ತೋರಿಸಿದರೆ ಪಾಸ್ ನೀಡಲಾಗುವುದು. ಎರಡನೆಯ ವಿಷಯವೆಂದರೆ 60 ಕಿಮೀ ದೂರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾಗಳು ಇರುವಂತಿಲ್ಲ, ಒಂದು ವೇಳೆ ಇದ್ದರೆ ಅದು ಕಾನೂನು ಬಾಹಿರವಾಗಿದೆ ಮತ್ತು ಅದನ್ನು ಪರಿಶೀಲಿಸಿ ಮೂರು ತಿಂಗಳೊಳಗೆ ತೆಗೆದುಹಾಕಲಾಗುವುದು.”

ಈ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ “ಮಾರ್ಚ್ 22, 2022ರಂದು ಡೆಕ್ಕನ್ ಹೆರಾಲ್ಡ್ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯಲ್ಲಿ “ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಸ್ಪರ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಪ್ಲಾಝಾಗಳನ್ನು ಮುಂದಿನ ಮೂರು ತಿಂಗಳಲ್ಲಿ ತೆಗೆದು ಹಾಕಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ” ಎಂದಿದೆ.

ಇದೇ ವರದಿಯಲ್ಲಿ “ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಟೋಲ್ ಪ್ಲಾಜಾಗಳ ಬಳಿ ಇರುವ ಸ್ಥಳೀಯ ನಿವಾಸಿಗಳಿಗೆ ಅವರ ಆಧಾರ್ ಕಾರ್ಡ್ ವಿಳಾಸವನ್ನು ಆಧರಿಸಿ ಸರ್ಕಾರ ಉಚಿತ ಪಾಸ್‌ಗಳನ್ನು ನೀಡುತ್ತದೆ ಎಂದು ಗಡ್ಕರಿ ಹೇಳಿದರು. ಲೋಕಸಭೆಯಲ್ಲಿ ಮುಂದಿನ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆ ಕುರಿತ ಚರ್ಚೆಗೆ ಉತ್ತರಿಸಿದರು” ಎಂದು ಹೇಳಲಾಗಿದೆ.

ಮಾರ್ಚ್ 22, 2023ರಂದು ಪ್ರಕಟಗೊಂಡ ದಿ ಹಿಂದೂ ವರದಿಯಲ್ಲಿ, “ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿ.ಮೀ ದೂರಕ್ಕೆ ಒಂದೇ ಟೋಲ್ ಪ್ಲಾಝಾ ಇರಲಿದ್ದು, ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಝಾಗಳಿದ್ದರೆ ಮುಂದಿನ ಮೂರು ತಿಂಗಳಲ್ಲಿ ಅಂತವುಗಳನ್ನು ಮುಚ್ಚಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಲೋಕಸಭೆಯಲ್ಲಿ ಘೋಷಿಸಿದ್ದಾರೆ” ಎಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಪ್ಲಾಝಾ ವ್ಯಾಪ್ತಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ. ಇದು ವೈರಲ್‌ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಆದರೆ, ವಿಡಿಯೋ ಜೊತೆಗೆ ಹಂಚಿಕೊಳ್ಳಲಾದ ಹೇಳಿಕೆಯಲ್ಲಿ ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಗೇಟ್ ಇದ್ದರೂ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಹೇಳಿರುವುದು ಸುಳ್ಳು ಪ್ರತಿಪಾದನೆಯಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...