Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...