Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...