Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...