Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...