Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...