Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...