Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...