Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...