Homeಫ್ಯಾಕ್ಟ್‌ಚೆಕ್FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲು ಮತ್ತು ಮಾರಕ ರೋಗಕ್ಕೆ ತುತ್ತಾಗುವಂತೆ ಮಾಡಲು ಮುಸ್ಲಿಮರು ಖರ್ಜೂರದಲ್ಲಿ ಮಾತ್ರೆಗಳ ಇಟ್ಟು ಮಾರಾಟ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬರು ಮಾತ್ರೆಗೆ ನೀರು ಹಾಕಿ ಕಲಸಿ, ಅದನ್ನು ಖರ್ಚೂರದ ಒಳಗೆ ಸೇರಿಸುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆ ಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ” ಎಂಬ ಬರಹದೊಂದಿಗೆ ವಾಟ್ಸಾಪ್‌ನಲ್ಲಿ ವಿಡಿಯೋವನ್ನು ಜೊತೆಗೆ ಹಂಚಿಕೊಳ್ಳಲಾಗುತ್ತಿದೆ.

ಕೆಲ ಫೇಸ್‌ಬುಕ್‌ ಪೇಜ್‌ಗಳಲ್ಲಿಯೂ ಮೇಲಿನ ಬರಹೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಅವುಗಳ ಸ್ಕ್ರೀನ್‌ ಶಾಟ್ ಕೆಳಗೆ ನೋಡಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ‘ತಾಝಾ ಟಿವಿ ಚಾನೆಲ್‘ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 13, 2025ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಅದರಲ್ಲಿ “ಡ್ರಗ್ ಗ್ಯಾಂಗ್‌ ರೈಲಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಖರ್ಜೂರದಲ್ಲಿ ಡ್ರಗ್ ಸೇರಿಸುವ ಮೂಲಕ ವಿಶಿಷ್ಟ ದಾರಿ ಕಂಡುಕೊಂಡಿದೆ. ಆರ್‌ಪಿಎಫ್‌ ತಂಡ ಇವರನ್ನು ಹೌರಾ ನಿಲ್ದಾಣದಲ್ಲಿ ಸೆರೆ ಹಿಡಿದಿದೆ” ಎಂದು ಬರೆದುಕೊಳ್ಳಲಾಗಿದೆ.

Screenshot

ಈ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಫ್ಯಾಕ್ಟ್‌ಲೀ‘ ಜನವರಿ 20,2025ರಂದು ಈ ಕುರಿತು ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ.

ವರದಿಯಲ್ಲಿ” ವಿಡಿಯೋ ಸಂಬಂಧ ನಾವು ಕೋಲ್ಕತ್ತಾದಲ್ಲಿ ‘ದಿ ಲೋಕಲ್ ಜರ್ನಲಿಸ್ಟ್’ ಎಂಬ ಸುದ್ದಿ ವೆಬ್‌ಸೈಟ್‌, ಫೇಸ್‌ಬುಕ್ ಪೇಜ್ ಮತ್ತು ಇನ್‌ಸ್ಟಾಗ್ರಾಂ ಪೇಜ್ ನಡೆಸುತ್ತಿರುವ ಸ್ಥಳೀಯ ಪತ್ರಿಕಾ ವರದಿಗಾರನನ್ನು ಸಂಪರ್ಕಿಸಿದ್ದೇವೆ. ಅವರು “ವೈರಲ್ ವಿಡಿಯೋ ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯದ್ದು. ಖರ್ಜೂರದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ ಪ್ರಯಾಣಿಕರಿಗೆ ಕೊಟ್ಟ ಬಳಿಕ ಹೇಗೆ ದರೋಡೆ ಮಾಡಲಾಗುತ್ತಿದ್ದು ಎಂಬುವುದನ್ನು ದರೋಡೆ ತಂಡ ಪೊಲೀಸರ ಮುಂದೆ ಮಾಡಿ ತೋರಿಸಿದೆ” ಎಂಬುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದುವರಿದು..”ಈ ಘಟನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾವು ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದೇವೆ. ನಮ್ಮೊಂದಿಗೆ ಮಾತನಾಡಿದ ಹೌರಾ ಜಿಆರ್‌ಪಿ ಪೊಲೀಸ್ ಅಧಿಕಾರಿಗಳು, ಈ ದರೋಡೆಕೋರರು ಪ್ರಯಾಣಿಕರಿಗೆ ಮತ್ತು ಬರುವ ಆಹಾರವನ್ನು ನೀಡುವ ಮೂಲಕ ರೈಲುಗಳಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದರೋಡೆಕೋರರು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿರಲಿಲ್ಲ. ಅಲ್ಲದೆ, ಮತ್ತು ಬರುವ ಮಾತ್ರೆಗಳು ದುರ್ಬಲತೆಯನ್ನು ಉಂಟುಮಾಡುವ ಔಷಧಿಗಳಲ್ಲ ಎಂದು ತಿಳಿಸಿದ್ದಾರೆ” ಎಂದು ಫ್ಯಾಕ್ಟ್‌ಲೀ ವರದಿ ವಿವರಿಸಿದೆ.

ಪ್ರಕರಣ ಸಂಬಂಧ ನಾವು ಪಶ್ಚಿಮ ಬಂಗಾಳ ಪೊಲೀಸ್ ವೆಬ್‌ಸೈಟ್‌ ಪರಿಶೀಲಿಸಿದಾಗ ಎಫ್‌ಐಆರ್ ಪ್ರತಿಯೂ ಲಭ್ಯವಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 11,2025 ರಂದು, ಹೌರಾ ರೈಲು ನಿಲ್ದಾಣದ ಹಳೆಯ ಸಂಕೀರ್ಣದ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ ಮೂವರು ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಅವರು ರೈಲುಗಳಲ್ಲಿ ಪ್ರಯಾಣಿಕರಿಗೆ ಖರ್ಜೂರಲ್ಲಿ ಅಮಲು ಮಾತ್ರೆಗಳನ್ನು (ಅಟಿವಾನ್ 2 ಎಂಜಿ) ಬೆರೆಸಿ ಕೊಟ್ಟ ಬಳಿಕ ದರೋಡೆ ಮಾಡುತ್ತಿದ್ದರು.

ಎಫ್‌ಐಆರ್‌ನಲ್ಲಿ ಶಂಬ್ರು ಪಾಸ್ವಾನ್, ಗೋವಿಂದ್ ಕುಮಾರ್ ಮತ್ತು ಮೊಹಮ್ಮದ್ ಇರ್ಫಾನ್ ಎಂದು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರತಿಯನ್ನು ಇಲ್ಲಿ ನೋಡಬಹುದು.

ಎಫ್‌ಐಆರ್ ಪ್ರತಿ

ಒಟ್ಟಾರೆಯಾಗಿ ಹೇಳುವುದಾದರೆ, ಮೂವರು ದರೋಡೆಕೋರರ ತಂಡ ಖರ್ಜೂರದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ರೈಲು ಪ್ರಯಾಣಿಕರಿಗೆ ಕೊಟ್ಟ ಬಳಿಕ ದರೋಡೆ ಮಾಡುತ್ತಿತ್ತು. ಈ ತಂಡವನ್ನು ಜನವರಿ 11,2025 ರಂದು ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಬಳಿಕ, ಅವರಲ್ಲಿ ಒಬ್ಬ ಹೇಗೆ ದರೋಡೆ ಮಾಡುತ್ತಿದ್ದೆವು ಎಂದು ಪೊಲೀಸರಿಗೆ ತೋರಿಸಿದ್ದಾರೆ. ಆ ವಿಡಿಯೋ ಆಗಿದೆ ವೈರಲ್ ಆಗಿರುವುದು.

ಅದಲ್ಲದೆ, ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲೋ, ಮಾರಕ ರೋಗ ಬರುವಂತೆ ಮಾಡಲೋ ಮುಸ್ಲಿಮರು ಮಾತ್ರೆ ಬೆರೆಸಿ ಕೊಟ್ಟದಲ್ಲ.

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...