Homeಫ್ಯಾಕ್ಟ್‌ಚೆಕ್FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲು ಮತ್ತು ಮಾರಕ ರೋಗಕ್ಕೆ ತುತ್ತಾಗುವಂತೆ ಮಾಡಲು ಮುಸ್ಲಿಮರು ಖರ್ಜೂರದಲ್ಲಿ ಮಾತ್ರೆಗಳ ಇಟ್ಟು ಮಾರಾಟ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬರು ಮಾತ್ರೆಗೆ ನೀರು ಹಾಕಿ ಕಲಸಿ, ಅದನ್ನು ಖರ್ಚೂರದ ಒಳಗೆ ಸೇರಿಸುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆ ಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ” ಎಂಬ ಬರಹದೊಂದಿಗೆ ವಾಟ್ಸಾಪ್‌ನಲ್ಲಿ ವಿಡಿಯೋವನ್ನು ಜೊತೆಗೆ ಹಂಚಿಕೊಳ್ಳಲಾಗುತ್ತಿದೆ.

ಕೆಲ ಫೇಸ್‌ಬುಕ್‌ ಪೇಜ್‌ಗಳಲ್ಲಿಯೂ ಮೇಲಿನ ಬರಹೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಅವುಗಳ ಸ್ಕ್ರೀನ್‌ ಶಾಟ್ ಕೆಳಗೆ ನೋಡಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ‘ತಾಝಾ ಟಿವಿ ಚಾನೆಲ್‘ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 13, 2025ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಅದರಲ್ಲಿ “ಡ್ರಗ್ ಗ್ಯಾಂಗ್‌ ರೈಲಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಖರ್ಜೂರದಲ್ಲಿ ಡ್ರಗ್ ಸೇರಿಸುವ ಮೂಲಕ ವಿಶಿಷ್ಟ ದಾರಿ ಕಂಡುಕೊಂಡಿದೆ. ಆರ್‌ಪಿಎಫ್‌ ತಂಡ ಇವರನ್ನು ಹೌರಾ ನಿಲ್ದಾಣದಲ್ಲಿ ಸೆರೆ ಹಿಡಿದಿದೆ” ಎಂದು ಬರೆದುಕೊಳ್ಳಲಾಗಿದೆ.

Screenshot

ಈ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಫ್ಯಾಕ್ಟ್‌ಲೀ‘ ಜನವರಿ 20,2025ರಂದು ಈ ಕುರಿತು ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ.

ವರದಿಯಲ್ಲಿ” ವಿಡಿಯೋ ಸಂಬಂಧ ನಾವು ಕೋಲ್ಕತ್ತಾದಲ್ಲಿ ‘ದಿ ಲೋಕಲ್ ಜರ್ನಲಿಸ್ಟ್’ ಎಂಬ ಸುದ್ದಿ ವೆಬ್‌ಸೈಟ್‌, ಫೇಸ್‌ಬುಕ್ ಪೇಜ್ ಮತ್ತು ಇನ್‌ಸ್ಟಾಗ್ರಾಂ ಪೇಜ್ ನಡೆಸುತ್ತಿರುವ ಸ್ಥಳೀಯ ಪತ್ರಿಕಾ ವರದಿಗಾರನನ್ನು ಸಂಪರ್ಕಿಸಿದ್ದೇವೆ. ಅವರು “ವೈರಲ್ ವಿಡಿಯೋ ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯದ್ದು. ಖರ್ಜೂರದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ ಪ್ರಯಾಣಿಕರಿಗೆ ಕೊಟ್ಟ ಬಳಿಕ ಹೇಗೆ ದರೋಡೆ ಮಾಡಲಾಗುತ್ತಿದ್ದು ಎಂಬುವುದನ್ನು ದರೋಡೆ ತಂಡ ಪೊಲೀಸರ ಮುಂದೆ ಮಾಡಿ ತೋರಿಸಿದೆ” ಎಂಬುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದುವರಿದು..”ಈ ಘಟನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾವು ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದೇವೆ. ನಮ್ಮೊಂದಿಗೆ ಮಾತನಾಡಿದ ಹೌರಾ ಜಿಆರ್‌ಪಿ ಪೊಲೀಸ್ ಅಧಿಕಾರಿಗಳು, ಈ ದರೋಡೆಕೋರರು ಪ್ರಯಾಣಿಕರಿಗೆ ಮತ್ತು ಬರುವ ಆಹಾರವನ್ನು ನೀಡುವ ಮೂಲಕ ರೈಲುಗಳಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದರೋಡೆಕೋರರು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿರಲಿಲ್ಲ. ಅಲ್ಲದೆ, ಮತ್ತು ಬರುವ ಮಾತ್ರೆಗಳು ದುರ್ಬಲತೆಯನ್ನು ಉಂಟುಮಾಡುವ ಔಷಧಿಗಳಲ್ಲ ಎಂದು ತಿಳಿಸಿದ್ದಾರೆ” ಎಂದು ಫ್ಯಾಕ್ಟ್‌ಲೀ ವರದಿ ವಿವರಿಸಿದೆ.

ಪ್ರಕರಣ ಸಂಬಂಧ ನಾವು ಪಶ್ಚಿಮ ಬಂಗಾಳ ಪೊಲೀಸ್ ವೆಬ್‌ಸೈಟ್‌ ಪರಿಶೀಲಿಸಿದಾಗ ಎಫ್‌ಐಆರ್ ಪ್ರತಿಯೂ ಲಭ್ಯವಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 11,2025 ರಂದು, ಹೌರಾ ರೈಲು ನಿಲ್ದಾಣದ ಹಳೆಯ ಸಂಕೀರ್ಣದ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ ಮೂವರು ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಅವರು ರೈಲುಗಳಲ್ಲಿ ಪ್ರಯಾಣಿಕರಿಗೆ ಖರ್ಜೂರಲ್ಲಿ ಅಮಲು ಮಾತ್ರೆಗಳನ್ನು (ಅಟಿವಾನ್ 2 ಎಂಜಿ) ಬೆರೆಸಿ ಕೊಟ್ಟ ಬಳಿಕ ದರೋಡೆ ಮಾಡುತ್ತಿದ್ದರು.

ಎಫ್‌ಐಆರ್‌ನಲ್ಲಿ ಶಂಬ್ರು ಪಾಸ್ವಾನ್, ಗೋವಿಂದ್ ಕುಮಾರ್ ಮತ್ತು ಮೊಹಮ್ಮದ್ ಇರ್ಫಾನ್ ಎಂದು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರತಿಯನ್ನು ಇಲ್ಲಿ ನೋಡಬಹುದು.

ಎಫ್‌ಐಆರ್ ಪ್ರತಿ

ಒಟ್ಟಾರೆಯಾಗಿ ಹೇಳುವುದಾದರೆ, ಮೂವರು ದರೋಡೆಕೋರರ ತಂಡ ಖರ್ಜೂರದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ರೈಲು ಪ್ರಯಾಣಿಕರಿಗೆ ಕೊಟ್ಟ ಬಳಿಕ ದರೋಡೆ ಮಾಡುತ್ತಿತ್ತು. ಈ ತಂಡವನ್ನು ಜನವರಿ 11,2025 ರಂದು ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಬಳಿಕ, ಅವರಲ್ಲಿ ಒಬ್ಬ ಹೇಗೆ ದರೋಡೆ ಮಾಡುತ್ತಿದ್ದೆವು ಎಂದು ಪೊಲೀಸರಿಗೆ ತೋರಿಸಿದ್ದಾರೆ. ಆ ವಿಡಿಯೋ ಆಗಿದೆ ವೈರಲ್ ಆಗಿರುವುದು.

ಅದಲ್ಲದೆ, ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲೋ, ಮಾರಕ ರೋಗ ಬರುವಂತೆ ಮಾಡಲೋ ಮುಸ್ಲಿಮರು ಮಾತ್ರೆ ಬೆರೆಸಿ ಕೊಟ್ಟದಲ್ಲ.

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....