Homeಫ್ಯಾಕ್ಟ್‌ಚೆಕ್FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲು ಮತ್ತು ಮಾರಕ ರೋಗಕ್ಕೆ ತುತ್ತಾಗುವಂತೆ ಮಾಡಲು ಮುಸ್ಲಿಮರು ಖರ್ಜೂರದಲ್ಲಿ ಮಾತ್ರೆಗಳ ಇಟ್ಟು ಮಾರಾಟ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬರು ಮಾತ್ರೆಗೆ ನೀರು ಹಾಕಿ ಕಲಸಿ, ಅದನ್ನು ಖರ್ಚೂರದ ಒಳಗೆ ಸೇರಿಸುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆ ಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ” ಎಂಬ ಬರಹದೊಂದಿಗೆ ವಾಟ್ಸಾಪ್‌ನಲ್ಲಿ ವಿಡಿಯೋವನ್ನು ಜೊತೆಗೆ ಹಂಚಿಕೊಳ್ಳಲಾಗುತ್ತಿದೆ.

ಕೆಲ ಫೇಸ್‌ಬುಕ್‌ ಪೇಜ್‌ಗಳಲ್ಲಿಯೂ ಮೇಲಿನ ಬರಹೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಅವುಗಳ ಸ್ಕ್ರೀನ್‌ ಶಾಟ್ ಕೆಳಗೆ ನೋಡಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ‘ತಾಝಾ ಟಿವಿ ಚಾನೆಲ್‘ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 13, 2025ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಅದರಲ್ಲಿ “ಡ್ರಗ್ ಗ್ಯಾಂಗ್‌ ರೈಲಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಖರ್ಜೂರದಲ್ಲಿ ಡ್ರಗ್ ಸೇರಿಸುವ ಮೂಲಕ ವಿಶಿಷ್ಟ ದಾರಿ ಕಂಡುಕೊಂಡಿದೆ. ಆರ್‌ಪಿಎಫ್‌ ತಂಡ ಇವರನ್ನು ಹೌರಾ ನಿಲ್ದಾಣದಲ್ಲಿ ಸೆರೆ ಹಿಡಿದಿದೆ” ಎಂದು ಬರೆದುಕೊಳ್ಳಲಾಗಿದೆ.

Screenshot

ಈ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಫ್ಯಾಕ್ಟ್‌ಲೀ‘ ಜನವರಿ 20,2025ರಂದು ಈ ಕುರಿತು ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ.

ವರದಿಯಲ್ಲಿ” ವಿಡಿಯೋ ಸಂಬಂಧ ನಾವು ಕೋಲ್ಕತ್ತಾದಲ್ಲಿ ‘ದಿ ಲೋಕಲ್ ಜರ್ನಲಿಸ್ಟ್’ ಎಂಬ ಸುದ್ದಿ ವೆಬ್‌ಸೈಟ್‌, ಫೇಸ್‌ಬುಕ್ ಪೇಜ್ ಮತ್ತು ಇನ್‌ಸ್ಟಾಗ್ರಾಂ ಪೇಜ್ ನಡೆಸುತ್ತಿರುವ ಸ್ಥಳೀಯ ಪತ್ರಿಕಾ ವರದಿಗಾರನನ್ನು ಸಂಪರ್ಕಿಸಿದ್ದೇವೆ. ಅವರು “ವೈರಲ್ ವಿಡಿಯೋ ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯದ್ದು. ಖರ್ಜೂರದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ ಪ್ರಯಾಣಿಕರಿಗೆ ಕೊಟ್ಟ ಬಳಿಕ ಹೇಗೆ ದರೋಡೆ ಮಾಡಲಾಗುತ್ತಿದ್ದು ಎಂಬುವುದನ್ನು ದರೋಡೆ ತಂಡ ಪೊಲೀಸರ ಮುಂದೆ ಮಾಡಿ ತೋರಿಸಿದೆ” ಎಂಬುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದುವರಿದು..”ಈ ಘಟನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾವು ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದೇವೆ. ನಮ್ಮೊಂದಿಗೆ ಮಾತನಾಡಿದ ಹೌರಾ ಜಿಆರ್‌ಪಿ ಪೊಲೀಸ್ ಅಧಿಕಾರಿಗಳು, ಈ ದರೋಡೆಕೋರರು ಪ್ರಯಾಣಿಕರಿಗೆ ಮತ್ತು ಬರುವ ಆಹಾರವನ್ನು ನೀಡುವ ಮೂಲಕ ರೈಲುಗಳಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದರೋಡೆಕೋರರು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿರಲಿಲ್ಲ. ಅಲ್ಲದೆ, ಮತ್ತು ಬರುವ ಮಾತ್ರೆಗಳು ದುರ್ಬಲತೆಯನ್ನು ಉಂಟುಮಾಡುವ ಔಷಧಿಗಳಲ್ಲ ಎಂದು ತಿಳಿಸಿದ್ದಾರೆ” ಎಂದು ಫ್ಯಾಕ್ಟ್‌ಲೀ ವರದಿ ವಿವರಿಸಿದೆ.

ಪ್ರಕರಣ ಸಂಬಂಧ ನಾವು ಪಶ್ಚಿಮ ಬಂಗಾಳ ಪೊಲೀಸ್ ವೆಬ್‌ಸೈಟ್‌ ಪರಿಶೀಲಿಸಿದಾಗ ಎಫ್‌ಐಆರ್ ಪ್ರತಿಯೂ ಲಭ್ಯವಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 11,2025 ರಂದು, ಹೌರಾ ರೈಲು ನಿಲ್ದಾಣದ ಹಳೆಯ ಸಂಕೀರ್ಣದ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ ಮೂವರು ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಅವರು ರೈಲುಗಳಲ್ಲಿ ಪ್ರಯಾಣಿಕರಿಗೆ ಖರ್ಜೂರಲ್ಲಿ ಅಮಲು ಮಾತ್ರೆಗಳನ್ನು (ಅಟಿವಾನ್ 2 ಎಂಜಿ) ಬೆರೆಸಿ ಕೊಟ್ಟ ಬಳಿಕ ದರೋಡೆ ಮಾಡುತ್ತಿದ್ದರು.

ಎಫ್‌ಐಆರ್‌ನಲ್ಲಿ ಶಂಬ್ರು ಪಾಸ್ವಾನ್, ಗೋವಿಂದ್ ಕುಮಾರ್ ಮತ್ತು ಮೊಹಮ್ಮದ್ ಇರ್ಫಾನ್ ಎಂದು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರತಿಯನ್ನು ಇಲ್ಲಿ ನೋಡಬಹುದು.

ಎಫ್‌ಐಆರ್ ಪ್ರತಿ

ಒಟ್ಟಾರೆಯಾಗಿ ಹೇಳುವುದಾದರೆ, ಮೂವರು ದರೋಡೆಕೋರರ ತಂಡ ಖರ್ಜೂರದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ರೈಲು ಪ್ರಯಾಣಿಕರಿಗೆ ಕೊಟ್ಟ ಬಳಿಕ ದರೋಡೆ ಮಾಡುತ್ತಿತ್ತು. ಈ ತಂಡವನ್ನು ಜನವರಿ 11,2025 ರಂದು ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಬಳಿಕ, ಅವರಲ್ಲಿ ಒಬ್ಬ ಹೇಗೆ ದರೋಡೆ ಮಾಡುತ್ತಿದ್ದೆವು ಎಂದು ಪೊಲೀಸರಿಗೆ ತೋರಿಸಿದ್ದಾರೆ. ಆ ವಿಡಿಯೋ ಆಗಿದೆ ವೈರಲ್ ಆಗಿರುವುದು.

ಅದಲ್ಲದೆ, ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲೋ, ಮಾರಕ ರೋಗ ಬರುವಂತೆ ಮಾಡಲೋ ಮುಸ್ಲಿಮರು ಮಾತ್ರೆ ಬೆರೆಸಿ ಕೊಟ್ಟದಲ್ಲ.

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...