Homeಫ್ಯಾಕ್ಟ್‌ಚೆಕ್FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲು ಮತ್ತು ಮಾರಕ ರೋಗಕ್ಕೆ ತುತ್ತಾಗುವಂತೆ ಮಾಡಲು ಮುಸ್ಲಿಮರು ಖರ್ಜೂರದಲ್ಲಿ ಮಾತ್ರೆಗಳ ಇಟ್ಟು ಮಾರಾಟ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬರು ಮಾತ್ರೆಗೆ ನೀರು ಹಾಕಿ ಕಲಸಿ, ಅದನ್ನು ಖರ್ಚೂರದ ಒಳಗೆ ಸೇರಿಸುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆ ಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ” ಎಂಬ ಬರಹದೊಂದಿಗೆ ವಾಟ್ಸಾಪ್‌ನಲ್ಲಿ ವಿಡಿಯೋವನ್ನು ಜೊತೆಗೆ ಹಂಚಿಕೊಳ್ಳಲಾಗುತ್ತಿದೆ.

ಕೆಲ ಫೇಸ್‌ಬುಕ್‌ ಪೇಜ್‌ಗಳಲ್ಲಿಯೂ ಮೇಲಿನ ಬರಹೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಅವುಗಳ ಸ್ಕ್ರೀನ್‌ ಶಾಟ್ ಕೆಳಗೆ ನೋಡಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ‘ತಾಝಾ ಟಿವಿ ಚಾನೆಲ್‘ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 13, 2025ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಅದರಲ್ಲಿ “ಡ್ರಗ್ ಗ್ಯಾಂಗ್‌ ರೈಲಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಖರ್ಜೂರದಲ್ಲಿ ಡ್ರಗ್ ಸೇರಿಸುವ ಮೂಲಕ ವಿಶಿಷ್ಟ ದಾರಿ ಕಂಡುಕೊಂಡಿದೆ. ಆರ್‌ಪಿಎಫ್‌ ತಂಡ ಇವರನ್ನು ಹೌರಾ ನಿಲ್ದಾಣದಲ್ಲಿ ಸೆರೆ ಹಿಡಿದಿದೆ” ಎಂದು ಬರೆದುಕೊಳ್ಳಲಾಗಿದೆ.

Screenshot

ಈ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಫ್ಯಾಕ್ಟ್‌ಲೀ‘ ಜನವರಿ 20,2025ರಂದು ಈ ಕುರಿತು ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ.

ವರದಿಯಲ್ಲಿ” ವಿಡಿಯೋ ಸಂಬಂಧ ನಾವು ಕೋಲ್ಕತ್ತಾದಲ್ಲಿ ‘ದಿ ಲೋಕಲ್ ಜರ್ನಲಿಸ್ಟ್’ ಎಂಬ ಸುದ್ದಿ ವೆಬ್‌ಸೈಟ್‌, ಫೇಸ್‌ಬುಕ್ ಪೇಜ್ ಮತ್ತು ಇನ್‌ಸ್ಟಾಗ್ರಾಂ ಪೇಜ್ ನಡೆಸುತ್ತಿರುವ ಸ್ಥಳೀಯ ಪತ್ರಿಕಾ ವರದಿಗಾರನನ್ನು ಸಂಪರ್ಕಿಸಿದ್ದೇವೆ. ಅವರು “ವೈರಲ್ ವಿಡಿಯೋ ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯದ್ದು. ಖರ್ಜೂರದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ ಪ್ರಯಾಣಿಕರಿಗೆ ಕೊಟ್ಟ ಬಳಿಕ ಹೇಗೆ ದರೋಡೆ ಮಾಡಲಾಗುತ್ತಿದ್ದು ಎಂಬುವುದನ್ನು ದರೋಡೆ ತಂಡ ಪೊಲೀಸರ ಮುಂದೆ ಮಾಡಿ ತೋರಿಸಿದೆ” ಎಂಬುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದುವರಿದು..”ಈ ಘಟನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾವು ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದೇವೆ. ನಮ್ಮೊಂದಿಗೆ ಮಾತನಾಡಿದ ಹೌರಾ ಜಿಆರ್‌ಪಿ ಪೊಲೀಸ್ ಅಧಿಕಾರಿಗಳು, ಈ ದರೋಡೆಕೋರರು ಪ್ರಯಾಣಿಕರಿಗೆ ಮತ್ತು ಬರುವ ಆಹಾರವನ್ನು ನೀಡುವ ಮೂಲಕ ರೈಲುಗಳಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದರೋಡೆಕೋರರು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿರಲಿಲ್ಲ. ಅಲ್ಲದೆ, ಮತ್ತು ಬರುವ ಮಾತ್ರೆಗಳು ದುರ್ಬಲತೆಯನ್ನು ಉಂಟುಮಾಡುವ ಔಷಧಿಗಳಲ್ಲ ಎಂದು ತಿಳಿಸಿದ್ದಾರೆ” ಎಂದು ಫ್ಯಾಕ್ಟ್‌ಲೀ ವರದಿ ವಿವರಿಸಿದೆ.

ಪ್ರಕರಣ ಸಂಬಂಧ ನಾವು ಪಶ್ಚಿಮ ಬಂಗಾಳ ಪೊಲೀಸ್ ವೆಬ್‌ಸೈಟ್‌ ಪರಿಶೀಲಿಸಿದಾಗ ಎಫ್‌ಐಆರ್ ಪ್ರತಿಯೂ ಲಭ್ಯವಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 11,2025 ರಂದು, ಹೌರಾ ರೈಲು ನಿಲ್ದಾಣದ ಹಳೆಯ ಸಂಕೀರ್ಣದ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ ಮೂವರು ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಅವರು ರೈಲುಗಳಲ್ಲಿ ಪ್ರಯಾಣಿಕರಿಗೆ ಖರ್ಜೂರಲ್ಲಿ ಅಮಲು ಮಾತ್ರೆಗಳನ್ನು (ಅಟಿವಾನ್ 2 ಎಂಜಿ) ಬೆರೆಸಿ ಕೊಟ್ಟ ಬಳಿಕ ದರೋಡೆ ಮಾಡುತ್ತಿದ್ದರು.

ಎಫ್‌ಐಆರ್‌ನಲ್ಲಿ ಶಂಬ್ರು ಪಾಸ್ವಾನ್, ಗೋವಿಂದ್ ಕುಮಾರ್ ಮತ್ತು ಮೊಹಮ್ಮದ್ ಇರ್ಫಾನ್ ಎಂದು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರತಿಯನ್ನು ಇಲ್ಲಿ ನೋಡಬಹುದು.

ಎಫ್‌ಐಆರ್ ಪ್ರತಿ

ಒಟ್ಟಾರೆಯಾಗಿ ಹೇಳುವುದಾದರೆ, ಮೂವರು ದರೋಡೆಕೋರರ ತಂಡ ಖರ್ಜೂರದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ರೈಲು ಪ್ರಯಾಣಿಕರಿಗೆ ಕೊಟ್ಟ ಬಳಿಕ ದರೋಡೆ ಮಾಡುತ್ತಿತ್ತು. ಈ ತಂಡವನ್ನು ಜನವರಿ 11,2025 ರಂದು ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಬಳಿಕ, ಅವರಲ್ಲಿ ಒಬ್ಬ ಹೇಗೆ ದರೋಡೆ ಮಾಡುತ್ತಿದ್ದೆವು ಎಂದು ಪೊಲೀಸರಿಗೆ ತೋರಿಸಿದ್ದಾರೆ. ಆ ವಿಡಿಯೋ ಆಗಿದೆ ವೈರಲ್ ಆಗಿರುವುದು.

ಅದಲ್ಲದೆ, ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲೋ, ಮಾರಕ ರೋಗ ಬರುವಂತೆ ಮಾಡಲೋ ಮುಸ್ಲಿಮರು ಮಾತ್ರೆ ಬೆರೆಸಿ ಕೊಟ್ಟದಲ್ಲ.

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...