Homeಫ್ಯಾಕ್ಟ್‌ಚೆಕ್FACT CHECK : 'ಸ್ಟಾರ್' ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

- Advertisement -
- Advertisement -

“ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿಯಾಗಿದ್ದು, ಮಾರುಕಟ್ಟೆಯಲ್ಲಿ ಹರಿದಾಡುತ್ತಿವೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಎಕ್ಸ್‌ ಮತ್ತು ವಾಟ್ಸಾಪ್ ಬಳಕೆದಾರರು ಈ ಸುದ್ದಿ ನಿಜವೆಂದು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಈ ಹಿಂದೆ ಇದೇ ರೀತಿಯ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆಗ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಈ ಸಂದೇಶ ಸುಳ್ಳು ಎಂದು ಖಚಿತಪಡಿಸಿತ್ತು.

ಡಿಸೆಂಬರ್ 7, 2023ರಂದು ಪಿಐಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಕೆಳಗಿದೆ.

ಜುಲೈ 31, 2023ರಂದು ಹಿಂದೂಸ್ತಾನ್ ಟೈಮ್ಸ್ 500 ರೂ. ನೋಟುಗಳಲ್ಲಿ ಸ್ಟಾರ್‌ ಚಿಹ್ನೆ ಇರುವುದರ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ 500 ರೂ. ಕರೆನ್ಸಿ ನೋಟಿನಲ್ಲಿ ಸ್ಟಾರ್ ಚಿಹ್ನೆಯಿದ್ದರೆ ಭಯಪಡಬೇಡಿ. ಅದು ನಕಲಿ ಅಲ್ಲ ಎಂದು ಆರ್‌ಬಿಐ ಖಚಿತಪಡಿಸಿರುವುದಾಗಿ ಹೇಳಿತ್ತು.

ಇನ್ನು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕೂಡ 500 ರೂಪಾಯಿ ಹೊಸ ಕರೆನ್ಸಿ ನೋಟಿನ ಕುರಿತು ಮಾಹಿತಿಯಿದೆ.

ಡಿಸೆಂಬರ್ 16,2016ರಂದು ಹೊಸ 500 ರೂ. ಕರೆನ್ಸಿ ನೋಟುಗಳ ಕುರಿತು ಆರ್‌ಬಿಯ ಹೊರಡಿಸಿದ ಪತ್ರಿಕಾ ಪ್ರಕಟಣೆ ಇಂದಿಗೂ ಅದರ ವೆಬ್‌ಸೈಟ್‌ನಲ್ಲಿದೆ. ಪ್ರಕಟಣೆಯಲ್ಲಿ “ಆರ್‌ಬಿಐ ಶೀಘ್ರದಲ್ಲೇ ಮಹಾತ್ಮಾ ಗಾಂಧಿ (ಎಂ.ಜಿ) ಸರಣಿಯಲ್ಲಿ ರೂ. 500 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ. ಈ ನೋಟಿನ ಎರಡೂ ನಂಬರ್‌ ಪ್ಯಾನೆಲ್‌ಗಳಲ್ಲಿ ‘E’ಎಂಬ ಇನ್‌ಸೆಟ್ ಅಕ್ಷರ ಇರಲಿದೆ. ಜೊತೆಗೆ‘*’ (ನಕ್ಷತ್ರ) ಗುರುತು ಕೂಡ ಇರಲಿದೆ. ಇದೇ ಮೊದಲ ಬಾರಿಗೆ ನಕ್ಷತ್ರ ಚಿಹ್ನೆಯೊಂದಿಗೆ 500 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 10, 20, 50 ಮತ್ತು 100 ರೂ. ಸರಣಿಯ ನಕ್ಷತ್ರ ಗುರುತು ಹೊಂದಿರುವ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ. ನವೆಂಬರ್ 8, 2016 ರಂದು ಹೊರ ತರಲಾದ ಈ ನೋಟುಗಳು ಕಾನೂನು ಬದ್ಧವಾಗಿವೆ. ಅಲ್ಲದೆ, ಹೊಸ ನೋಟು ಆರ್‌ಬಿಐ ಗವರ್ನರ್ ಡಾ.ಉರ್ಜಿತ್ ಆರ್.ಪಟೇಲ್ ಅವರ ಸಹಿ ಮತ್ತು ಹಿಂಬದಿಯಲ್ಲಿ ಸ್ವಚ್ಛ ಭಾರತ ಲೋಗೋ ಹೊಂದಿರಲಿದೆ” ಎಂದು ಹೇಳಲಾಗಿದೆ.

ಆರ್‌ಬಿಐ ಅಧಿಕೃತ ಪ್ರಕಟಣೆಯಲ್ಲೇ ಹೊಸ 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಸ್ಟಾರ್ ಅಥವಾ ನಕ್ಷತ್ರ ಚಿಹ್ನೆ ಹೊಂದಿರಲಿದೆ ಎಂದು ತಿಳಿಸಿದೆ. ಹಾಗಾಗಿ, ಸ್ಟಾರ್ ಗುರುತಿನ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು.

ಆದರೆ, ಅಸಲಿ ನೋಟಿನಂತೆಯೇ ಸ್ಟಾರ್‌ ಚಿಹ್ನೆಯಿರುವ ನಕಲಿ ನೋಟುಗಳು ಕೂಡ ಮಾರುಕಟ್ಟೆಯಲ್ಲಿ ಹರಿದಾಡುತ್ತಿರಬಹುದು. ನಕಲಿ ನೋಟು ದಂದೆಕೋರರು ಅಸಲಿ ನೋಟಿನಂತೆಯೇ ನಕಲಿ ನೋಟು ತಯಾರಿಸಿರಬಹುದು. ಹಾಗಾಗಿ, ನೋಟುಗಳನ್ನು ಪರಿಶೀಲಿಸಿ ಚಲಾಯಿಸುವುದು ಉತ್ತಮ.

ಇದನ್ನೂ ಓದಿ : FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...