Homeಫ್ಯಾಕ್ಟ್‌ಚೆಕ್FACT CHECK : 'ಸ್ಟಾರ್' ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

- Advertisement -
- Advertisement -

“ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿಯಾಗಿದ್ದು, ಮಾರುಕಟ್ಟೆಯಲ್ಲಿ ಹರಿದಾಡುತ್ತಿವೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಎಕ್ಸ್‌ ಮತ್ತು ವಾಟ್ಸಾಪ್ ಬಳಕೆದಾರರು ಈ ಸುದ್ದಿ ನಿಜವೆಂದು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಈ ಹಿಂದೆ ಇದೇ ರೀತಿಯ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆಗ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಈ ಸಂದೇಶ ಸುಳ್ಳು ಎಂದು ಖಚಿತಪಡಿಸಿತ್ತು.

ಡಿಸೆಂಬರ್ 7, 2023ರಂದು ಪಿಐಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಕೆಳಗಿದೆ.

ಜುಲೈ 31, 2023ರಂದು ಹಿಂದೂಸ್ತಾನ್ ಟೈಮ್ಸ್ 500 ರೂ. ನೋಟುಗಳಲ್ಲಿ ಸ್ಟಾರ್‌ ಚಿಹ್ನೆ ಇರುವುದರ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ 500 ರೂ. ಕರೆನ್ಸಿ ನೋಟಿನಲ್ಲಿ ಸ್ಟಾರ್ ಚಿಹ್ನೆಯಿದ್ದರೆ ಭಯಪಡಬೇಡಿ. ಅದು ನಕಲಿ ಅಲ್ಲ ಎಂದು ಆರ್‌ಬಿಐ ಖಚಿತಪಡಿಸಿರುವುದಾಗಿ ಹೇಳಿತ್ತು.

ಇನ್ನು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕೂಡ 500 ರೂಪಾಯಿ ಹೊಸ ಕರೆನ್ಸಿ ನೋಟಿನ ಕುರಿತು ಮಾಹಿತಿಯಿದೆ.

ಡಿಸೆಂಬರ್ 16,2016ರಂದು ಹೊಸ 500 ರೂ. ಕರೆನ್ಸಿ ನೋಟುಗಳ ಕುರಿತು ಆರ್‌ಬಿಯ ಹೊರಡಿಸಿದ ಪತ್ರಿಕಾ ಪ್ರಕಟಣೆ ಇಂದಿಗೂ ಅದರ ವೆಬ್‌ಸೈಟ್‌ನಲ್ಲಿದೆ. ಪ್ರಕಟಣೆಯಲ್ಲಿ “ಆರ್‌ಬಿಐ ಶೀಘ್ರದಲ್ಲೇ ಮಹಾತ್ಮಾ ಗಾಂಧಿ (ಎಂ.ಜಿ) ಸರಣಿಯಲ್ಲಿ ರೂ. 500 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ. ಈ ನೋಟಿನ ಎರಡೂ ನಂಬರ್‌ ಪ್ಯಾನೆಲ್‌ಗಳಲ್ಲಿ ‘E’ಎಂಬ ಇನ್‌ಸೆಟ್ ಅಕ್ಷರ ಇರಲಿದೆ. ಜೊತೆಗೆ‘*’ (ನಕ್ಷತ್ರ) ಗುರುತು ಕೂಡ ಇರಲಿದೆ. ಇದೇ ಮೊದಲ ಬಾರಿಗೆ ನಕ್ಷತ್ರ ಚಿಹ್ನೆಯೊಂದಿಗೆ 500 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 10, 20, 50 ಮತ್ತು 100 ರೂ. ಸರಣಿಯ ನಕ್ಷತ್ರ ಗುರುತು ಹೊಂದಿರುವ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ. ನವೆಂಬರ್ 8, 2016 ರಂದು ಹೊರ ತರಲಾದ ಈ ನೋಟುಗಳು ಕಾನೂನು ಬದ್ಧವಾಗಿವೆ. ಅಲ್ಲದೆ, ಹೊಸ ನೋಟು ಆರ್‌ಬಿಐ ಗವರ್ನರ್ ಡಾ.ಉರ್ಜಿತ್ ಆರ್.ಪಟೇಲ್ ಅವರ ಸಹಿ ಮತ್ತು ಹಿಂಬದಿಯಲ್ಲಿ ಸ್ವಚ್ಛ ಭಾರತ ಲೋಗೋ ಹೊಂದಿರಲಿದೆ” ಎಂದು ಹೇಳಲಾಗಿದೆ.

ಆರ್‌ಬಿಐ ಅಧಿಕೃತ ಪ್ರಕಟಣೆಯಲ್ಲೇ ಹೊಸ 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಸ್ಟಾರ್ ಅಥವಾ ನಕ್ಷತ್ರ ಚಿಹ್ನೆ ಹೊಂದಿರಲಿದೆ ಎಂದು ತಿಳಿಸಿದೆ. ಹಾಗಾಗಿ, ಸ್ಟಾರ್ ಗುರುತಿನ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು.

ಆದರೆ, ಅಸಲಿ ನೋಟಿನಂತೆಯೇ ಸ್ಟಾರ್‌ ಚಿಹ್ನೆಯಿರುವ ನಕಲಿ ನೋಟುಗಳು ಕೂಡ ಮಾರುಕಟ್ಟೆಯಲ್ಲಿ ಹರಿದಾಡುತ್ತಿರಬಹುದು. ನಕಲಿ ನೋಟು ದಂದೆಕೋರರು ಅಸಲಿ ನೋಟಿನಂತೆಯೇ ನಕಲಿ ನೋಟು ತಯಾರಿಸಿರಬಹುದು. ಹಾಗಾಗಿ, ನೋಟುಗಳನ್ನು ಪರಿಶೀಲಿಸಿ ಚಲಾಯಿಸುವುದು ಉತ್ತಮ.

ಇದನ್ನೂ ಓದಿ : FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...