Homeಫ್ಯಾಕ್ಟ್‌ಚೆಕ್FACT CHECK : 'ಸ್ಟಾರ್' ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

- Advertisement -
- Advertisement -

“ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿಯಾಗಿದ್ದು, ಮಾರುಕಟ್ಟೆಯಲ್ಲಿ ಹರಿದಾಡುತ್ತಿವೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಎಕ್ಸ್‌ ಮತ್ತು ವಾಟ್ಸಾಪ್ ಬಳಕೆದಾರರು ಈ ಸುದ್ದಿ ನಿಜವೆಂದು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಈ ಹಿಂದೆ ಇದೇ ರೀತಿಯ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆಗ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಈ ಸಂದೇಶ ಸುಳ್ಳು ಎಂದು ಖಚಿತಪಡಿಸಿತ್ತು.

ಡಿಸೆಂಬರ್ 7, 2023ರಂದು ಪಿಐಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಕೆಳಗಿದೆ.

ಜುಲೈ 31, 2023ರಂದು ಹಿಂದೂಸ್ತಾನ್ ಟೈಮ್ಸ್ 500 ರೂ. ನೋಟುಗಳಲ್ಲಿ ಸ್ಟಾರ್‌ ಚಿಹ್ನೆ ಇರುವುದರ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ 500 ರೂ. ಕರೆನ್ಸಿ ನೋಟಿನಲ್ಲಿ ಸ್ಟಾರ್ ಚಿಹ್ನೆಯಿದ್ದರೆ ಭಯಪಡಬೇಡಿ. ಅದು ನಕಲಿ ಅಲ್ಲ ಎಂದು ಆರ್‌ಬಿಐ ಖಚಿತಪಡಿಸಿರುವುದಾಗಿ ಹೇಳಿತ್ತು.

ಇನ್ನು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕೂಡ 500 ರೂಪಾಯಿ ಹೊಸ ಕರೆನ್ಸಿ ನೋಟಿನ ಕುರಿತು ಮಾಹಿತಿಯಿದೆ.

ಡಿಸೆಂಬರ್ 16,2016ರಂದು ಹೊಸ 500 ರೂ. ಕರೆನ್ಸಿ ನೋಟುಗಳ ಕುರಿತು ಆರ್‌ಬಿಯ ಹೊರಡಿಸಿದ ಪತ್ರಿಕಾ ಪ್ರಕಟಣೆ ಇಂದಿಗೂ ಅದರ ವೆಬ್‌ಸೈಟ್‌ನಲ್ಲಿದೆ. ಪ್ರಕಟಣೆಯಲ್ಲಿ “ಆರ್‌ಬಿಐ ಶೀಘ್ರದಲ್ಲೇ ಮಹಾತ್ಮಾ ಗಾಂಧಿ (ಎಂ.ಜಿ) ಸರಣಿಯಲ್ಲಿ ರೂ. 500 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ. ಈ ನೋಟಿನ ಎರಡೂ ನಂಬರ್‌ ಪ್ಯಾನೆಲ್‌ಗಳಲ್ಲಿ ‘E’ಎಂಬ ಇನ್‌ಸೆಟ್ ಅಕ್ಷರ ಇರಲಿದೆ. ಜೊತೆಗೆ‘*’ (ನಕ್ಷತ್ರ) ಗುರುತು ಕೂಡ ಇರಲಿದೆ. ಇದೇ ಮೊದಲ ಬಾರಿಗೆ ನಕ್ಷತ್ರ ಚಿಹ್ನೆಯೊಂದಿಗೆ 500 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 10, 20, 50 ಮತ್ತು 100 ರೂ. ಸರಣಿಯ ನಕ್ಷತ್ರ ಗುರುತು ಹೊಂದಿರುವ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ. ನವೆಂಬರ್ 8, 2016 ರಂದು ಹೊರ ತರಲಾದ ಈ ನೋಟುಗಳು ಕಾನೂನು ಬದ್ಧವಾಗಿವೆ. ಅಲ್ಲದೆ, ಹೊಸ ನೋಟು ಆರ್‌ಬಿಐ ಗವರ್ನರ್ ಡಾ.ಉರ್ಜಿತ್ ಆರ್.ಪಟೇಲ್ ಅವರ ಸಹಿ ಮತ್ತು ಹಿಂಬದಿಯಲ್ಲಿ ಸ್ವಚ್ಛ ಭಾರತ ಲೋಗೋ ಹೊಂದಿರಲಿದೆ” ಎಂದು ಹೇಳಲಾಗಿದೆ.

ಆರ್‌ಬಿಐ ಅಧಿಕೃತ ಪ್ರಕಟಣೆಯಲ್ಲೇ ಹೊಸ 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಸ್ಟಾರ್ ಅಥವಾ ನಕ್ಷತ್ರ ಚಿಹ್ನೆ ಹೊಂದಿರಲಿದೆ ಎಂದು ತಿಳಿಸಿದೆ. ಹಾಗಾಗಿ, ಸ್ಟಾರ್ ಗುರುತಿನ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು.

ಆದರೆ, ಅಸಲಿ ನೋಟಿನಂತೆಯೇ ಸ್ಟಾರ್‌ ಚಿಹ್ನೆಯಿರುವ ನಕಲಿ ನೋಟುಗಳು ಕೂಡ ಮಾರುಕಟ್ಟೆಯಲ್ಲಿ ಹರಿದಾಡುತ್ತಿರಬಹುದು. ನಕಲಿ ನೋಟು ದಂದೆಕೋರರು ಅಸಲಿ ನೋಟಿನಂತೆಯೇ ನಕಲಿ ನೋಟು ತಯಾರಿಸಿರಬಹುದು. ಹಾಗಾಗಿ, ನೋಟುಗಳನ್ನು ಪರಿಶೀಲಿಸಿ ಚಲಾಯಿಸುವುದು ಉತ್ತಮ.

ಇದನ್ನೂ ಓದಿ : FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...