Homeಫ್ಯಾಕ್ಟ್‌ಚೆಕ್Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

- Advertisement -
- Advertisement -

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದಾರೆ.

ಬಿಜೆಪಿ ತೆಲಂಗಾಣ ರಾಜ್ಯದ ಕೋಶಾಧಿಕಾರಿ ಶಾಂತಿ ಕುಮಾರ್ ಅವರು ವಿಡಿಯೋ ಹಂಚಿಕೊಂಡಿದ್ದು, “ಇಲ್ಲ! ಇದು ಪಾಕಿಸ್ತಾನವಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು. ಇದರಲ್ಲಿ ಒಂದಾದರು ಭಾರತದ ರಾಷ್ಟ್ರ ಧ್ವಜ ತೋರಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ? ರಾಹುಲ್ ಗಾಂಧಿಯವರೇ. ಅದು, ಕಾಂಗ್ರೆಸ್‌ನಲ್ಲಿ ಹರಿಯುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮತ್ತೊಬ್ಬ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ᏙᏦ (@_VK86) ಎಂಬವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದೇ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇನ್ನೋರ್ವ ಬಲಪಂಥೀಯ ಎಕ್ಸ್ ಬಳಕೆದಾರ ‘@SharwanKumarBi7’ಎಂಬವರು ಕೂಡ ವಿಡಿಯೋ ಹಂಚಿಕೊಂಡು, ಈಗಾಗಲೇ ಇಬ್ಬರು ಹೇಳಿದಂತೆ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ. ಕಾಂ ಮೊದಲು ವಿಡಿಯೋದಲ್ಲಿ ಬರೆಯಲಾದ ಮಲಯಾಳಂ ವಾಕ್ಯದ ಅರ್ಥ ತಿಳಿಯುವ ಪ್ರಯತ್ನ ಮಾಡಿದೆ. https://newschecker.in/ಎಂಬ ವೆಬ್‌ಸೈಟ್‌ ಹೇಳಿರುವಂತೆ ವಿಡಿಯೋ ಮೇಲೆ ‘ಕೊಂಡೊಟ್ಟಿ ಪಚ್ಚಪಡ’ (ಕೊಂಡೊಟ್ಟಿ ಹಸಿರುಮಯ) ಎಂದು ಬರೆಯಲಾಗಿದೆ.

ಈ ಅಂಶವನ್ನು ಇಟ್ಟುಕೊಂಡು ನಾವು ಇನ್ನಷ್ಟು ಹುಡುಕಾಟ ನಡೆಸಿದಾಗ ‘ಕೊಂಡೊಟ್ಟಿ ಪಚ್ಚಪಡ’ ಎಂಬ ಫೇಸ್‌ಬುಕ್ ಪೇಜ್ ನಮಗೆ ಸಿಕ್ಕಿದೆ. ಆ ಪೇಜ್ ಪರಿಶೀಲಿಸಿ ನೋಡಿದಾಗ ಏಪ್ರಿಲ್ 19, 2019ರಂದು ವೈರಲ್ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಜೊತೆಗೆ ಮಲಯಾಳಂನಲ್ಲಿ ವಿವರಣೆ ಬರೆಯಲಾಗಿದೆ. ಅದರ ಅರ್ಥ ಹೀಗಿದೆ… “ಕೋಲರಾಜನ್ ಜೈಲಿಗೆ ಹೋಗಲಿದ್ದಾರೆ, ಮುರಳೀಧರನ್ ವಡಗರದಿಂದ ಸಂಸತ್ತಿಗೆ ಹೋಗಲಿದ್ದಾರೆ. ಕೆ ಮುರಳೀಧರನ್ ಅವರ ಪ್ರಚಾರ ಕಾರ್ಯದಲ್ಲಿ ಯೂತ್ ಲೀಗ್‌ನ ಮಕ್ಕಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ”. ಇಲ್ಲಿ ‘ಕೋಲರಾಜನ್’ ಎಂಬುವುದು ಚುನಾವಣೆಯಲ್ಲಿ ಮುರಳೀಧರನ್ ಅವರ ಎದುರಾಳಿಯಾಗಿದ್ದ ಪಿ ಜಯರಾಜನ್ ಅವರ ಹೆಸರನ್ನು ವ್ಯಂಗ್ಯವಾಗಿ ಬರೆದಿರುವುದಾಗಿದೆ.

ಇದೇ ರೀತಿಯ ಮತ್ತೊಂದು ಪೋಸ್ಟ್ ಅನ್ನು ಏಪ್ರಿಲ್ 19,2019 ರಂದು ಎಂ.ಕೆ ಸವಾದ್ ಎಂಬ ಫೇಸ್‌ಬುಕ್‌ ಖಾತೆಯಲ್ಲೂ ಹಂಚಿಕೊಂಡಿರುವುದು ಕಂಡು ಬಂದಿದೆ. ‘ಕೊಂಡೊಟ್ಟಿ ಪಚ್ಚಪಡ’ ಪೇಜ್‌ನಲ್ಲಿ ಬರೆದುಕೊಂಡಂತೆ ಇಲ್ಲೂ ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಅಂದ ಹಾಗೆ, ವೈರಲ್ ವಿಡಿಯೋ 2019 ರಲ್ಲಿ ಮುರಳೀಧರನ್ ಅವರು ವಡಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನಡೆಸಿದ ಪ್ರಚಾರ ಜಾಥದ್ದಾಗಿದೆ. ಈ ಚುನಾವಣೆಯಲ್ಲಿ ಮುರಳೀಧರನ್ ಗೆಲುವು ದಾಖಲಿಸಿದ್ದರು.

ಮೇಲೆ ನಾವು ಉಲ್ಲೇಖಿಸಿದ ಮಾಹಿತಿಗಳ ಪ್ರಕಾರ, ಈಗ ವೈರಲ್ ಆಗುತ್ತಿರುವ ವಿಡಿಯೋ 2019ರದ್ದು ಎಂಬುವುದು ಖಚಿತವಾಗಿದೆ.

ಪಾಕಿಸ್ತಾನದ ಧ್ವಜ ಬಳಸಿದ್ದು ನಿಜಾನ?:

ವೈರಲ್ ವಿಡಿಯೋದಲ್ಲಿರುವ ಹಸರು ಬಣ್ಣದ ಧ್ವಜವನ್ನು ಬಲಪಂಥೀಯರು ಪಾಕಿಸ್ತಾನದ ಧ್ವಜ ಎಂಬಂತೆ ಬಿಂಬಿಸಿದ್ದಾರೆ. ಆದರೆ, ಅದು ಪಾಕಿಸ್ತಾನದ ಧ್ವಜವಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ್ದಾಗಿದೆ. ಈ ಧ್ವಜವು ಭಾರತೀಯ ಚುನಾವಣಾ ಆಯೋಗ ಅಂಗೀಕರಿಸಲ್ಪಟ್ಟ ಧ್ವಜವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸವಿದೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.
ಕೊನೆಯದಾಗಿ, ಬಲಪಂಥೀಯರು ಪಾಕಿಸ್ತಾನದಂತೆ ಬಿಂಬಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಅವರ ಚುನಾವಣಾ ಪ್ರಚಾರದಲ್ಲಿ ಕಂಡು ಬಂದಿರುವ ಧ್ವಜ ಪಾಕಿಸ್ತಾನದ್ದಲ್ಲ. ಅದು ಮುಸ್ಲಿಂ ಲೀಗ್‌ ಪಕ್ಷದ ಧ್ವಜ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಯುಡಿಎಫ್ ಮೈತ್ರಿಕೂಟದ ಪಕ್ಷಗಳಾಗಿವೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಪರ ಪ್ರಚಾರಕ್ಕೆ ಮುಸ್ಲಿಂ ಲೀಗ್‌ನ ಕಾರ್ಯಕರ್ತರು ತಮ್ಮ ಧ್ವಜದೊಂದಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿದೆ ವಿಡಿಯೋದಲ್ಲಿರುವುದು. ಅಲ್ಲದೆ, ಅದು ಹಳೆಯ ವಿಡಿಯೋ ಕೂಡ ಹೌದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...