Homeಫ್ಯಾಕ್ಟ್‌ಚೆಕ್Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

- Advertisement -
- Advertisement -

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದಾರೆ.

ಬಿಜೆಪಿ ತೆಲಂಗಾಣ ರಾಜ್ಯದ ಕೋಶಾಧಿಕಾರಿ ಶಾಂತಿ ಕುಮಾರ್ ಅವರು ವಿಡಿಯೋ ಹಂಚಿಕೊಂಡಿದ್ದು, “ಇಲ್ಲ! ಇದು ಪಾಕಿಸ್ತಾನವಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು. ಇದರಲ್ಲಿ ಒಂದಾದರು ಭಾರತದ ರಾಷ್ಟ್ರ ಧ್ವಜ ತೋರಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ? ರಾಹುಲ್ ಗಾಂಧಿಯವರೇ. ಅದು, ಕಾಂಗ್ರೆಸ್‌ನಲ್ಲಿ ಹರಿಯುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮತ್ತೊಬ್ಬ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ᏙᏦ (@_VK86) ಎಂಬವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದೇ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇನ್ನೋರ್ವ ಬಲಪಂಥೀಯ ಎಕ್ಸ್ ಬಳಕೆದಾರ ‘@SharwanKumarBi7’ಎಂಬವರು ಕೂಡ ವಿಡಿಯೋ ಹಂಚಿಕೊಂಡು, ಈಗಾಗಲೇ ಇಬ್ಬರು ಹೇಳಿದಂತೆ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ. ಕಾಂ ಮೊದಲು ವಿಡಿಯೋದಲ್ಲಿ ಬರೆಯಲಾದ ಮಲಯಾಳಂ ವಾಕ್ಯದ ಅರ್ಥ ತಿಳಿಯುವ ಪ್ರಯತ್ನ ಮಾಡಿದೆ. https://newschecker.in/ಎಂಬ ವೆಬ್‌ಸೈಟ್‌ ಹೇಳಿರುವಂತೆ ವಿಡಿಯೋ ಮೇಲೆ ‘ಕೊಂಡೊಟ್ಟಿ ಪಚ್ಚಪಡ’ (ಕೊಂಡೊಟ್ಟಿ ಹಸಿರುಮಯ) ಎಂದು ಬರೆಯಲಾಗಿದೆ.

ಈ ಅಂಶವನ್ನು ಇಟ್ಟುಕೊಂಡು ನಾವು ಇನ್ನಷ್ಟು ಹುಡುಕಾಟ ನಡೆಸಿದಾಗ ‘ಕೊಂಡೊಟ್ಟಿ ಪಚ್ಚಪಡ’ ಎಂಬ ಫೇಸ್‌ಬುಕ್ ಪೇಜ್ ನಮಗೆ ಸಿಕ್ಕಿದೆ. ಆ ಪೇಜ್ ಪರಿಶೀಲಿಸಿ ನೋಡಿದಾಗ ಏಪ್ರಿಲ್ 19, 2019ರಂದು ವೈರಲ್ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಜೊತೆಗೆ ಮಲಯಾಳಂನಲ್ಲಿ ವಿವರಣೆ ಬರೆಯಲಾಗಿದೆ. ಅದರ ಅರ್ಥ ಹೀಗಿದೆ… “ಕೋಲರಾಜನ್ ಜೈಲಿಗೆ ಹೋಗಲಿದ್ದಾರೆ, ಮುರಳೀಧರನ್ ವಡಗರದಿಂದ ಸಂಸತ್ತಿಗೆ ಹೋಗಲಿದ್ದಾರೆ. ಕೆ ಮುರಳೀಧರನ್ ಅವರ ಪ್ರಚಾರ ಕಾರ್ಯದಲ್ಲಿ ಯೂತ್ ಲೀಗ್‌ನ ಮಕ್ಕಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ”. ಇಲ್ಲಿ ‘ಕೋಲರಾಜನ್’ ಎಂಬುವುದು ಚುನಾವಣೆಯಲ್ಲಿ ಮುರಳೀಧರನ್ ಅವರ ಎದುರಾಳಿಯಾಗಿದ್ದ ಪಿ ಜಯರಾಜನ್ ಅವರ ಹೆಸರನ್ನು ವ್ಯಂಗ್ಯವಾಗಿ ಬರೆದಿರುವುದಾಗಿದೆ.

ಇದೇ ರೀತಿಯ ಮತ್ತೊಂದು ಪೋಸ್ಟ್ ಅನ್ನು ಏಪ್ರಿಲ್ 19,2019 ರಂದು ಎಂ.ಕೆ ಸವಾದ್ ಎಂಬ ಫೇಸ್‌ಬುಕ್‌ ಖಾತೆಯಲ್ಲೂ ಹಂಚಿಕೊಂಡಿರುವುದು ಕಂಡು ಬಂದಿದೆ. ‘ಕೊಂಡೊಟ್ಟಿ ಪಚ್ಚಪಡ’ ಪೇಜ್‌ನಲ್ಲಿ ಬರೆದುಕೊಂಡಂತೆ ಇಲ್ಲೂ ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಅಂದ ಹಾಗೆ, ವೈರಲ್ ವಿಡಿಯೋ 2019 ರಲ್ಲಿ ಮುರಳೀಧರನ್ ಅವರು ವಡಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನಡೆಸಿದ ಪ್ರಚಾರ ಜಾಥದ್ದಾಗಿದೆ. ಈ ಚುನಾವಣೆಯಲ್ಲಿ ಮುರಳೀಧರನ್ ಗೆಲುವು ದಾಖಲಿಸಿದ್ದರು.

ಮೇಲೆ ನಾವು ಉಲ್ಲೇಖಿಸಿದ ಮಾಹಿತಿಗಳ ಪ್ರಕಾರ, ಈಗ ವೈರಲ್ ಆಗುತ್ತಿರುವ ವಿಡಿಯೋ 2019ರದ್ದು ಎಂಬುವುದು ಖಚಿತವಾಗಿದೆ.

ಪಾಕಿಸ್ತಾನದ ಧ್ವಜ ಬಳಸಿದ್ದು ನಿಜಾನ?:

ವೈರಲ್ ವಿಡಿಯೋದಲ್ಲಿರುವ ಹಸರು ಬಣ್ಣದ ಧ್ವಜವನ್ನು ಬಲಪಂಥೀಯರು ಪಾಕಿಸ್ತಾನದ ಧ್ವಜ ಎಂಬಂತೆ ಬಿಂಬಿಸಿದ್ದಾರೆ. ಆದರೆ, ಅದು ಪಾಕಿಸ್ತಾನದ ಧ್ವಜವಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ್ದಾಗಿದೆ. ಈ ಧ್ವಜವು ಭಾರತೀಯ ಚುನಾವಣಾ ಆಯೋಗ ಅಂಗೀಕರಿಸಲ್ಪಟ್ಟ ಧ್ವಜವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸವಿದೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.
ಕೊನೆಯದಾಗಿ, ಬಲಪಂಥೀಯರು ಪಾಕಿಸ್ತಾನದಂತೆ ಬಿಂಬಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಅವರ ಚುನಾವಣಾ ಪ್ರಚಾರದಲ್ಲಿ ಕಂಡು ಬಂದಿರುವ ಧ್ವಜ ಪಾಕಿಸ್ತಾನದ್ದಲ್ಲ. ಅದು ಮುಸ್ಲಿಂ ಲೀಗ್‌ ಪಕ್ಷದ ಧ್ವಜ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಯುಡಿಎಫ್ ಮೈತ್ರಿಕೂಟದ ಪಕ್ಷಗಳಾಗಿವೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಪರ ಪ್ರಚಾರಕ್ಕೆ ಮುಸ್ಲಿಂ ಲೀಗ್‌ನ ಕಾರ್ಯಕರ್ತರು ತಮ್ಮ ಧ್ವಜದೊಂದಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿದೆ ವಿಡಿಯೋದಲ್ಲಿರುವುದು. ಅಲ್ಲದೆ, ಅದು ಹಳೆಯ ವಿಡಿಯೋ ಕೂಡ ಹೌದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...