Homeಫ್ಯಾಕ್ಟ್‌ಚೆಕ್Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

- Advertisement -
- Advertisement -

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದಾರೆ.

ಬಿಜೆಪಿ ತೆಲಂಗಾಣ ರಾಜ್ಯದ ಕೋಶಾಧಿಕಾರಿ ಶಾಂತಿ ಕುಮಾರ್ ಅವರು ವಿಡಿಯೋ ಹಂಚಿಕೊಂಡಿದ್ದು, “ಇಲ್ಲ! ಇದು ಪಾಕಿಸ್ತಾನವಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು. ಇದರಲ್ಲಿ ಒಂದಾದರು ಭಾರತದ ರಾಷ್ಟ್ರ ಧ್ವಜ ತೋರಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ? ರಾಹುಲ್ ಗಾಂಧಿಯವರೇ. ಅದು, ಕಾಂಗ್ರೆಸ್‌ನಲ್ಲಿ ಹರಿಯುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮತ್ತೊಬ್ಬ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ᏙᏦ (@_VK86) ಎಂಬವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದೇ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇನ್ನೋರ್ವ ಬಲಪಂಥೀಯ ಎಕ್ಸ್ ಬಳಕೆದಾರ ‘@SharwanKumarBi7’ಎಂಬವರು ಕೂಡ ವಿಡಿಯೋ ಹಂಚಿಕೊಂಡು, ಈಗಾಗಲೇ ಇಬ್ಬರು ಹೇಳಿದಂತೆ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ. ಕಾಂ ಮೊದಲು ವಿಡಿಯೋದಲ್ಲಿ ಬರೆಯಲಾದ ಮಲಯಾಳಂ ವಾಕ್ಯದ ಅರ್ಥ ತಿಳಿಯುವ ಪ್ರಯತ್ನ ಮಾಡಿದೆ. https://newschecker.in/ಎಂಬ ವೆಬ್‌ಸೈಟ್‌ ಹೇಳಿರುವಂತೆ ವಿಡಿಯೋ ಮೇಲೆ ‘ಕೊಂಡೊಟ್ಟಿ ಪಚ್ಚಪಡ’ (ಕೊಂಡೊಟ್ಟಿ ಹಸಿರುಮಯ) ಎಂದು ಬರೆಯಲಾಗಿದೆ.

ಈ ಅಂಶವನ್ನು ಇಟ್ಟುಕೊಂಡು ನಾವು ಇನ್ನಷ್ಟು ಹುಡುಕಾಟ ನಡೆಸಿದಾಗ ‘ಕೊಂಡೊಟ್ಟಿ ಪಚ್ಚಪಡ’ ಎಂಬ ಫೇಸ್‌ಬುಕ್ ಪೇಜ್ ನಮಗೆ ಸಿಕ್ಕಿದೆ. ಆ ಪೇಜ್ ಪರಿಶೀಲಿಸಿ ನೋಡಿದಾಗ ಏಪ್ರಿಲ್ 19, 2019ರಂದು ವೈರಲ್ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಜೊತೆಗೆ ಮಲಯಾಳಂನಲ್ಲಿ ವಿವರಣೆ ಬರೆಯಲಾಗಿದೆ. ಅದರ ಅರ್ಥ ಹೀಗಿದೆ… “ಕೋಲರಾಜನ್ ಜೈಲಿಗೆ ಹೋಗಲಿದ್ದಾರೆ, ಮುರಳೀಧರನ್ ವಡಗರದಿಂದ ಸಂಸತ್ತಿಗೆ ಹೋಗಲಿದ್ದಾರೆ. ಕೆ ಮುರಳೀಧರನ್ ಅವರ ಪ್ರಚಾರ ಕಾರ್ಯದಲ್ಲಿ ಯೂತ್ ಲೀಗ್‌ನ ಮಕ್ಕಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ”. ಇಲ್ಲಿ ‘ಕೋಲರಾಜನ್’ ಎಂಬುವುದು ಚುನಾವಣೆಯಲ್ಲಿ ಮುರಳೀಧರನ್ ಅವರ ಎದುರಾಳಿಯಾಗಿದ್ದ ಪಿ ಜಯರಾಜನ್ ಅವರ ಹೆಸರನ್ನು ವ್ಯಂಗ್ಯವಾಗಿ ಬರೆದಿರುವುದಾಗಿದೆ.

ಇದೇ ರೀತಿಯ ಮತ್ತೊಂದು ಪೋಸ್ಟ್ ಅನ್ನು ಏಪ್ರಿಲ್ 19,2019 ರಂದು ಎಂ.ಕೆ ಸವಾದ್ ಎಂಬ ಫೇಸ್‌ಬುಕ್‌ ಖಾತೆಯಲ್ಲೂ ಹಂಚಿಕೊಂಡಿರುವುದು ಕಂಡು ಬಂದಿದೆ. ‘ಕೊಂಡೊಟ್ಟಿ ಪಚ್ಚಪಡ’ ಪೇಜ್‌ನಲ್ಲಿ ಬರೆದುಕೊಂಡಂತೆ ಇಲ್ಲೂ ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಅಂದ ಹಾಗೆ, ವೈರಲ್ ವಿಡಿಯೋ 2019 ರಲ್ಲಿ ಮುರಳೀಧರನ್ ಅವರು ವಡಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನಡೆಸಿದ ಪ್ರಚಾರ ಜಾಥದ್ದಾಗಿದೆ. ಈ ಚುನಾವಣೆಯಲ್ಲಿ ಮುರಳೀಧರನ್ ಗೆಲುವು ದಾಖಲಿಸಿದ್ದರು.

ಮೇಲೆ ನಾವು ಉಲ್ಲೇಖಿಸಿದ ಮಾಹಿತಿಗಳ ಪ್ರಕಾರ, ಈಗ ವೈರಲ್ ಆಗುತ್ತಿರುವ ವಿಡಿಯೋ 2019ರದ್ದು ಎಂಬುವುದು ಖಚಿತವಾಗಿದೆ.

ಪಾಕಿಸ್ತಾನದ ಧ್ವಜ ಬಳಸಿದ್ದು ನಿಜಾನ?:

ವೈರಲ್ ವಿಡಿಯೋದಲ್ಲಿರುವ ಹಸರು ಬಣ್ಣದ ಧ್ವಜವನ್ನು ಬಲಪಂಥೀಯರು ಪಾಕಿಸ್ತಾನದ ಧ್ವಜ ಎಂಬಂತೆ ಬಿಂಬಿಸಿದ್ದಾರೆ. ಆದರೆ, ಅದು ಪಾಕಿಸ್ತಾನದ ಧ್ವಜವಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ್ದಾಗಿದೆ. ಈ ಧ್ವಜವು ಭಾರತೀಯ ಚುನಾವಣಾ ಆಯೋಗ ಅಂಗೀಕರಿಸಲ್ಪಟ್ಟ ಧ್ವಜವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸವಿದೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.
ಕೊನೆಯದಾಗಿ, ಬಲಪಂಥೀಯರು ಪಾಕಿಸ್ತಾನದಂತೆ ಬಿಂಬಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಅವರ ಚುನಾವಣಾ ಪ್ರಚಾರದಲ್ಲಿ ಕಂಡು ಬಂದಿರುವ ಧ್ವಜ ಪಾಕಿಸ್ತಾನದ್ದಲ್ಲ. ಅದು ಮುಸ್ಲಿಂ ಲೀಗ್‌ ಪಕ್ಷದ ಧ್ವಜ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಯುಡಿಎಫ್ ಮೈತ್ರಿಕೂಟದ ಪಕ್ಷಗಳಾಗಿವೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಪರ ಪ್ರಚಾರಕ್ಕೆ ಮುಸ್ಲಿಂ ಲೀಗ್‌ನ ಕಾರ್ಯಕರ್ತರು ತಮ್ಮ ಧ್ವಜದೊಂದಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿದೆ ವಿಡಿಯೋದಲ್ಲಿರುವುದು. ಅಲ್ಲದೆ, ಅದು ಹಳೆಯ ವಿಡಿಯೋ ಕೂಡ ಹೌದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...