Homeಫ್ಯಾಕ್ಟ್‌ಚೆಕ್Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

- Advertisement -
- Advertisement -

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದಾರೆ.

ಬಿಜೆಪಿ ತೆಲಂಗಾಣ ರಾಜ್ಯದ ಕೋಶಾಧಿಕಾರಿ ಶಾಂತಿ ಕುಮಾರ್ ಅವರು ವಿಡಿಯೋ ಹಂಚಿಕೊಂಡಿದ್ದು, “ಇಲ್ಲ! ಇದು ಪಾಕಿಸ್ತಾನವಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ಭಾಗದಲ್ಲಿ ಪ್ರಚಾರ ಮಾಡುತ್ತಿರುವುದು. ಇದರಲ್ಲಿ ಒಂದಾದರು ಭಾರತದ ರಾಷ್ಟ್ರ ಧ್ವಜ ತೋರಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ? ರಾಹುಲ್ ಗಾಂಧಿಯವರೇ. ಅದು, ಕಾಂಗ್ರೆಸ್‌ನಲ್ಲಿ ಹರಿಯುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಮತ್ತೊಬ್ಬ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ᏙᏦ (@_VK86) ಎಂಬವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದೇ ರೀತಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇನ್ನೋರ್ವ ಬಲಪಂಥೀಯ ಎಕ್ಸ್ ಬಳಕೆದಾರ ‘@SharwanKumarBi7’ಎಂಬವರು ಕೂಡ ವಿಡಿಯೋ ಹಂಚಿಕೊಂಡು, ಈಗಾಗಲೇ ಇಬ್ಬರು ಹೇಳಿದಂತೆ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ. ಕಾಂ ಮೊದಲು ವಿಡಿಯೋದಲ್ಲಿ ಬರೆಯಲಾದ ಮಲಯಾಳಂ ವಾಕ್ಯದ ಅರ್ಥ ತಿಳಿಯುವ ಪ್ರಯತ್ನ ಮಾಡಿದೆ. https://newschecker.in/ಎಂಬ ವೆಬ್‌ಸೈಟ್‌ ಹೇಳಿರುವಂತೆ ವಿಡಿಯೋ ಮೇಲೆ ‘ಕೊಂಡೊಟ್ಟಿ ಪಚ್ಚಪಡ’ (ಕೊಂಡೊಟ್ಟಿ ಹಸಿರುಮಯ) ಎಂದು ಬರೆಯಲಾಗಿದೆ.

ಈ ಅಂಶವನ್ನು ಇಟ್ಟುಕೊಂಡು ನಾವು ಇನ್ನಷ್ಟು ಹುಡುಕಾಟ ನಡೆಸಿದಾಗ ‘ಕೊಂಡೊಟ್ಟಿ ಪಚ್ಚಪಡ’ ಎಂಬ ಫೇಸ್‌ಬುಕ್ ಪೇಜ್ ನಮಗೆ ಸಿಕ್ಕಿದೆ. ಆ ಪೇಜ್ ಪರಿಶೀಲಿಸಿ ನೋಡಿದಾಗ ಏಪ್ರಿಲ್ 19, 2019ರಂದು ವೈರಲ್ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋ ಜೊತೆಗೆ ಮಲಯಾಳಂನಲ್ಲಿ ವಿವರಣೆ ಬರೆಯಲಾಗಿದೆ. ಅದರ ಅರ್ಥ ಹೀಗಿದೆ… “ಕೋಲರಾಜನ್ ಜೈಲಿಗೆ ಹೋಗಲಿದ್ದಾರೆ, ಮುರಳೀಧರನ್ ವಡಗರದಿಂದ ಸಂಸತ್ತಿಗೆ ಹೋಗಲಿದ್ದಾರೆ. ಕೆ ಮುರಳೀಧರನ್ ಅವರ ಪ್ರಚಾರ ಕಾರ್ಯದಲ್ಲಿ ಯೂತ್ ಲೀಗ್‌ನ ಮಕ್ಕಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ”. ಇಲ್ಲಿ ‘ಕೋಲರಾಜನ್’ ಎಂಬುವುದು ಚುನಾವಣೆಯಲ್ಲಿ ಮುರಳೀಧರನ್ ಅವರ ಎದುರಾಳಿಯಾಗಿದ್ದ ಪಿ ಜಯರಾಜನ್ ಅವರ ಹೆಸರನ್ನು ವ್ಯಂಗ್ಯವಾಗಿ ಬರೆದಿರುವುದಾಗಿದೆ.

ಇದೇ ರೀತಿಯ ಮತ್ತೊಂದು ಪೋಸ್ಟ್ ಅನ್ನು ಏಪ್ರಿಲ್ 19,2019 ರಂದು ಎಂ.ಕೆ ಸವಾದ್ ಎಂಬ ಫೇಸ್‌ಬುಕ್‌ ಖಾತೆಯಲ್ಲೂ ಹಂಚಿಕೊಂಡಿರುವುದು ಕಂಡು ಬಂದಿದೆ. ‘ಕೊಂಡೊಟ್ಟಿ ಪಚ್ಚಪಡ’ ಪೇಜ್‌ನಲ್ಲಿ ಬರೆದುಕೊಂಡಂತೆ ಇಲ್ಲೂ ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಅಂದ ಹಾಗೆ, ವೈರಲ್ ವಿಡಿಯೋ 2019 ರಲ್ಲಿ ಮುರಳೀಧರನ್ ಅವರು ವಡಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ನಡೆಸಿದ ಪ್ರಚಾರ ಜಾಥದ್ದಾಗಿದೆ. ಈ ಚುನಾವಣೆಯಲ್ಲಿ ಮುರಳೀಧರನ್ ಗೆಲುವು ದಾಖಲಿಸಿದ್ದರು.

ಮೇಲೆ ನಾವು ಉಲ್ಲೇಖಿಸಿದ ಮಾಹಿತಿಗಳ ಪ್ರಕಾರ, ಈಗ ವೈರಲ್ ಆಗುತ್ತಿರುವ ವಿಡಿಯೋ 2019ರದ್ದು ಎಂಬುವುದು ಖಚಿತವಾಗಿದೆ.

ಪಾಕಿಸ್ತಾನದ ಧ್ವಜ ಬಳಸಿದ್ದು ನಿಜಾನ?:

ವೈರಲ್ ವಿಡಿಯೋದಲ್ಲಿರುವ ಹಸರು ಬಣ್ಣದ ಧ್ವಜವನ್ನು ಬಲಪಂಥೀಯರು ಪಾಕಿಸ್ತಾನದ ಧ್ವಜ ಎಂಬಂತೆ ಬಿಂಬಿಸಿದ್ದಾರೆ. ಆದರೆ, ಅದು ಪಾಕಿಸ್ತಾನದ ಧ್ವಜವಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ್ದಾಗಿದೆ. ಈ ಧ್ವಜವು ಭಾರತೀಯ ಚುನಾವಣಾ ಆಯೋಗ ಅಂಗೀಕರಿಸಲ್ಪಟ್ಟ ಧ್ವಜವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸವಿದೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.
ಕೊನೆಯದಾಗಿ, ಬಲಪಂಥೀಯರು ಪಾಕಿಸ್ತಾನದಂತೆ ಬಿಂಬಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಅವರ ಚುನಾವಣಾ ಪ್ರಚಾರದಲ್ಲಿ ಕಂಡು ಬಂದಿರುವ ಧ್ವಜ ಪಾಕಿಸ್ತಾನದ್ದಲ್ಲ. ಅದು ಮುಸ್ಲಿಂ ಲೀಗ್‌ ಪಕ್ಷದ ಧ್ವಜ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಯುಡಿಎಫ್ ಮೈತ್ರಿಕೂಟದ ಪಕ್ಷಗಳಾಗಿವೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಪರ ಪ್ರಚಾರಕ್ಕೆ ಮುಸ್ಲಿಂ ಲೀಗ್‌ನ ಕಾರ್ಯಕರ್ತರು ತಮ್ಮ ಧ್ವಜದೊಂದಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿದೆ ವಿಡಿಯೋದಲ್ಲಿರುವುದು. ಅಲ್ಲದೆ, ಅದು ಹಳೆಯ ವಿಡಿಯೋ ಕೂಡ ಹೌದು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...